ಸಕ್ಕರೆ ನಾಡಿಗೆ ಮತ್ತೊಂದು ಹೆಮ್ಮೆಯ ಗರಿ: ಮಂಡ್ಯ ಜಿಲ್ಲಾ ಪಂಚಾಯತ್ ಗೆ ರಾಷ್ಟ್ರೀಯ ಪ್ರಶಸ್ತಿ

ಮಂಡ್ಯ ಜಿಪಂಗೆ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ ಲಭಿಸಿದೆ. ಕರ್ನಾಟಕದಲ್ಲಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಈ ಪುರಸ್ಕಾರ ಲಭಿಸಿದ್ದು, 50 ಲಕ್ಷ ನಗದು ಬಹುಮಾನ ದೊರೆತಿದೆ.
ಮಂಡ್ಯ
ಮಂಡ್ಯ

ಮೈಸೂರು: ಮಂಡ್ಯ ಜಿಪಂಗೆ ದೀನ್‌ ದಯಾಳ್‌ ಉಪಾಧ್ಯಾಯ ಪಂಚಾಯತ್‌ ಸಶಕ್ತೀಕರಣ ಪುರಸ್ಕಾರ ಲಭಿಸಿದೆ. ಕರ್ನಾಟಕದಲ್ಲಿ ಕೇವಲ ಮಂಡ್ಯ ಜಿಲ್ಲೆಗೆ ಮಾತ್ರ ಈ ಪುರಸ್ಕಾರ ಲಭಿಸಿದ್ದು, 50 ಲಕ್ಷ ನಗದು ಬಹುಮಾನ ದೊರೆತಿದೆ.

ನಾಗರಿಕ ಸೇವೆಗಳ ಅಭಿವೃದ್ಧಿ, ಕಸ ವಿಂಗಡನೆ, ಪ್ಲಾಸ್ಟಿಕ್ ಮುಕ್ತ ಪಂಚಾಯತ್ ಸೇರಿದಂತೆ ಹಲವು ಕಾರ್ಯಕ್ರಮಗಳು ಈ ಪ್ರಶಸ್ತಿ ಲಭಿಸಲು ಕಾರಣವಾಗಿವೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಕೆ ಯಾಲಕ್ಕಿ ಹೇಳಿದ್ದಾರೆ.

ನಗರವನ್ನು ಸ್ವಚ್ಛವಾಗಿಸಲು ತಳ ಮಟ್ಟದಿಂದ ಶ್ರಮಿಸಿದ ಜಿಲ್ಲಾಡಳಿತಕ್ಕೆ ಈ ಕ್ರೆಡಿಟ್ ಸಲ್ಲುತ್ತದೆ ಎಂದು ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com