ಬಳ್ಳಾರಿ: ಸಿಡಿಲು ಬಡಿದು ರೈತ ಸಾವು

ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗುತ್ತಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಳ್ಳಾರಿ: ರಾಜ್ಯದ ವಿವಿಧೆಡೆ ವರುಣ ಕೃಪೆ ತೋರಿದ್ದು, ಬಿರುಗಾಳಿ ಸಮೇತ ಭಾರೀ ಮಳೆ ಆಗುತ್ತಿದೆ. ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಸೋಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಸೋಗಿ ಗ್ರಾಮದ ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು, ನೀರು ಹಾಯಿಸಲು ಜಮೀನಿಗೆ ತೆರಳಿದ್ದ ರೈತ ಚಂದ್ರಪ್ಪ(45) ಸಿಡಿಲಿಗೆ ಬಲಿಯಾಗಿದ್ದಾರೆ.

ಮಳೆ ಪ್ರಾರಂಭವಾಗುತ್ತಿದ್ದಂತೆ ಸಿಡಿಲು ಬಡಿದು ತೀವ್ರ ಅಸ್ವಸ್ಥಗೊಂಡಿದ್ದ ಚಂದ್ರಪ್ಪ ಅವರನ್ನು ಕೂಡಲೆ ಸೋಗಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ರೈತ ಮೃತಪಟ್ಟಿದ್ದಾರೆ.

ಈ ಸಂಬಂಧ ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com