ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ

ಮಾದಕ ವಸ್ತುಗಳ ವ್ಯಸನದ ಪಿಡುಗು ಮತ್ತು ಸಾಗಾಟದಂತಹ ಅಕ್ರಮಗಳಿಂದ ಸಮಾಜವನ್ನು ಮುಕ್ತಗೊಳಿಸಲು ಶ್ರಮಿಸೋಣ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಕರೆ ನೀಡಿದ್ದಾರೆ.
ಸಿಎಂ ಬಿಎಸ್ ವೈ
ಸಿಎಂ ಬಿಎಸ್ ವೈ

ಬೆಂಗಳೂರು: ಮಾದಕ ವಸ್ತುಗಳ ವ್ಯಸನದ ಪಿಡುಗು ಮತ್ತು ಸಾಗಾಟದಂತಹ ಅಕ್ರಮಗಳಿಂದ ಸಮಾಜವನ್ನು ಮುಕ್ತಗೊಳಿಸಲು ಶ್ರಮಿಸೋಣ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಕರೆ ನೀಡಿದ್ದಾರೆ.

ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದು, ಮಾದಕ ವಸ್ತುಗಳ ವ್ಯಸನ ಕೇವಲ ವ್ಯಕ್ತಿತ್ವಕ್ಕಷ್ಟೇ ಅಲ್ಲದೇ ಇಡೀ ಸಮಾಜದ ಸ್ವಾಸ್ಥ್ಯಕ್ಕೆ ದೊಡ್ಡ ಬೆದರಿಕೆಯಾಗಿದೆ. ಕೌಟುಂಬಿಕ ಬದುಕನ್ನೇ ನಾಶ ಮಾಡುವ ಮಾದಕ ವಸ್ತುಗಳ ವ್ಯಸನ ಮತ್ತು ಸಾಗಾಣಿಕೆಯ ದುಷ್ಪರಿಣಾಮ ಕುರಿತು ಅರಿವು ಮೂಡಿಸೋಣ ಎಂದು ಕರೆ ನೀಡಿದ್ದಾರೆ.

ಮಾದಕ ವಸ್ತುಗಳ ವ್ಯಸನದ ಪಿಡುಗು ಮತ್ತು ಸಾಗಾಟದಂತಹ ಅಕ್ರಮಗಳಿಂದ ಸಮಾಜವನ್ನು ಮುಕ್ತಗೊಳಿಸಲು ಶ್ರಮಿಸೋಣ ಎಂದು ಮುಖ್ಯಮಂತ್ರಿ ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com