ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ  ಆಧಾರ್ ಕಾರ್ಡ್ ಕಡ್ಡಾಯ: ಕೋಟ ಶ್ರೀನಿವಾಸ ಪೂಜಾರಿ

ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್‍ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ.
ಮೀನುಗಾರರು
ಮೀನುಗಾರರು

ಮಂಗಳೂರು: ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್‍ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ  ಹೇಳಿದ್ದಾರೆ.

ಮಂಗಳವಾರ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕರಾವಳಿ ಮೀನುಗಾರಿಕೆ ಕುರಿತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮೀನುಗಾರರ ರಕ್ಷಣೆ ಹಾಗೂ ಅವರ ಮಾಹಿತಿಯನ್ನು ಕಲೆ ಹಾಕುವ ದೃಷ್ಟಿಯಿಂದ ಕ್ಯೂ ಆರ್ ಕೋಡ್ ಆಧಾರಿತ ಬಯೋಮೆಟ್ರಿಕ್ ಕಾರ್ಡ್‍ಗಳನ್ನು ಹೊಂದುವುದು  ಕಡ್ಡಾಯವಾಗಿರುತ್ತದೆ. ಜಿಲ್ಲಾಡಳಿತದ ವತಿಯಿಂದ “ಸೇವಾ ಸಿಂಧು ಪೋರ್ಟ್‍ಲ್” ವೆಬ್‍ಸೈಟ್‍ನಲ್ಲಿ ಈ ಕಾರ್ಡ್‍ನ್ನು ಒದಗಿಸಲು ಅಥವಾ ಆಯಾ ಮೀನುಗಾರಿಕಾ ಇಲಾಖೆಯಲ್ಲಿ ದೊರಕುವಂತೆ ಮಾಡಲು ಚಿಂತನೆ ನಡೆಸುತ್ತೇವೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com