ಕೊಡಗು: ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ದುಬಾರೆಯಲ್ಲಿ ವರದಿಯಾಗಿದೆ.
ಲಯನ್ಸ್ ಶಾಲೆಯ ಶ್ರೇಯಸ್ [14] ಮತ್ತು ಲೆನಿನ್ (15) ಮೃತ ದುರ್ದೈವಿಗಳು.
ಶ್ರೇಯಸ್ 9ನೇ ಹಾಗೂ ಲೆನಿನ್ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಸ್ಕೌಟ್ಸ್ ಹಾಗೂ ಗೈಡ್ಸ್ ತಂಡದ ೩೯ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ದುಬಾರೆಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ. ಇನ್ನು ಶಾಲಾ ಶಿಕ್ಷಕರು ಈ ಪ್ರವಾಸಕ್ಕಾಗಿ ಇಲಾಖೆಯ ಅನುಮತಿ ಪಡೆದಿರಲಿಲ್ಲ ಎನ್ನಲಾಗಿದೆ. ಶಿಕ್ಷಕರ ನಿರ್ಲಕ್ಷ್ಯ ಃಆಗೂ ಸಂಸ್ಥೆಯ ವಿರುದ್ಧ ಸೂಕ್ತ ಕ್ರ್ಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹೇಳೀದ್ದಾರೆ.
ಘಟನೆ ಕುರಿತು ಕುಶಾಲನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement