ಬೆಂಗಳೂರು: ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಆರೋಗ್ಯ ಸಚಿವರು ಮತ್ತೆ ತಮ್ಮ ಜವಾಬ್ದಾರಿಯತ್ತ ಮುಖ ಮಾಡಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ರಾಜ್ಯದಲ್ಲಿ ಕೊರೋನಾ ಭೀತಿ ಕಾಣಿಸಿಕೊಂಡಿದ್ದು ಜನರು ಆತಂಕಕ್ಕೀಡಾಗಿದ್ದಾರೆ. ವೈರಸ್ ಕುರಿತು ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇದರ ಉಸ್ತುವಾರಿ ನೋಡಿಕೊಳ್ಳಬೇಕಿದ್ದ ಆರೋಗ್ಯ ಸಚಿವರ ಶ್ರೀರಾಮುಲು ಅವರು ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.
ಈ ನಡುವೆ ಪುತ್ರಿ ವಿವಾಹ ಕಾರ್ಯದಲ್ಲಿ ಕಾರ್ಯಮಗ್ನರಾಗಿದ್ದ ಕಾರಣದಿಂದ ಸಚಿವ ಶ್ರೀರಾಮುಲು ಅವರು ನಾಪತ್ತೆಯಾಗಿದ್ದಾರೆಂದು ವ್ಯಾಪಕ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿದ್ದವು.
ಇದೀಗ ದಿಢೀರ್ ಪ್ರತ್ಯಕ್ಷವಾಗಿರುವ ಸಚಿವರು, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೇಟಿ ನೀಡಿ, ಅಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ನಡೆಸಿದ್ದಾರೆ. ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ತಪಾಸಣೆ ನಡೆಸುವ ಸ್ಥಲಕ್ಕೆ ಭೇಟಿ ನೀಡಿದ ಸಚಿವರು, ಯಾವ ರೀತಿಯ ವ್ಯವಸ್ತೆಯನ್ನು ಕಲ್ಪಿಸಲಾಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.
Advertisement