ಮಂಡ್ಯ: ರಾಜಕೀಯ ದ್ವೇಷಕ್ಕೆ ಬಿಜೆಪಿ ಮುಖಂಡನ ಕಾರಿಗೆ ಬೆಂಕಿ

ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿರುವಘಟನೆ ಕೃಷ್ನರಾಜಟೆ ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ.
ಮಂಡ್ಯ: ರಾಜಕೀಯ ದ್ವೇಷಕ್ಕೆ ಬಿಜೆಪಿ ಮುಖಂಡನ ಕಾರಿಗೆ ಬೆಂಕಿ
ಮಂಡ್ಯ: ರಾಜಕೀಯ ದ್ವೇಷಕ್ಕೆ ಬಿಜೆಪಿ ಮುಖಂಡನ ಕಾರಿಗೆ ಬೆಂಕಿ

ಮಂಡ್ಯ:  ರಾಜಕೀಯ ದ್ವೇಷದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡನ ಕಾರಿಗೆ ಬೆಂಕಿ ಹಚ್ಚಿರುವಘಟನೆ ಕೃಷ್ನರಾಜಟೆ ತಾಲೂಕಿನ ಸಾಸಲು ಗ್ರಾಮದಲ್ಲಿ ನಡೆದಿದೆ.

ಬಿಜೆಪಿ ಮುಖಂಡ ನಾಗೇಶ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನಾಗೇಶ್ ಎಂಬುವರಿಗೆ ಸೇರಿದ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

 ಬೆಂಕಿಹಚ್ಚಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬೆಂಕಿ ನಂದಿಸಿದ್ದು, ಹೆಚ್ಚಿನ ಅನಾಹುತ ತಡೆದಿದ್ದಾರೆ. ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಮೊನ್ನೆಯಷ್ಟೇ ಸಾಸಲು ಗ್ರಾಮಕ್ಕೆ ಆಗಮಿಸಿದ್ದರು. 

ಸ್ವಾಗತ ಕೋರಿ ಹಾಕಿದ್ದ ಫ್ಲೆಕ್ಸ್ಗೂ ಸೆಗಣಿ ಬಳಿದಿದ್ದು, ರಾಜಕೀಯ ದ್ವೇಷಕ್ಕೆ  ಹೀಗೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾಗಯ್ಯ 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com