ನಾಲ್ಕು ಸಾವಿರಕ್ಕೂ ಹೆಚ್ಚು ಜನ ಪಾಲ್ಗೊಂಡಿದ್ದ ವಿವಾಹದಲ್ಲಿ ಯಡಿಯೂರಪ್ಪ ಭಾಗಿ: ತಮ್ಮದೇ ಆದೇಶ ಉಲ್ಲಂಘಿಸಿದ ಸಿಎಂ

ಮಾರಣಾಂತಿಕ ಕೊರೋನಾ ವೈರಸ್ ಕುರಿತ ಸರ್ಕಾರದ ನಿರ್ದೇಶನ ಉಲ್ಲಂಘಿಸಿ ಮೇಲ್ಮನೆಯ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿ ವಿವಾಹ ನೆರವೇರಿದ್ದು, ಮದುವೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡು ವದು ವರರನ್ನು ಆಶಿರ್ವದಿಸಿದ ಕುತೂಹಲಕರ ಸಂಗತಿ ಬೆಳಕಿಗೆ ಬಂದಿದೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಳಗಾವಿ: ಮಾರಣಾಂತಿಕ ಕೊರೋನಾ ವೈರಸ್ ಕುರಿತ ಸರ್ಕಾರದ ನಿರ್ದೇಶನ ಉಲ್ಲಂಘಿಸಿ ಮೇಲ್ಮನೆಯ ಸರ್ಕಾರಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಅವರ ಪುತ್ರಿ ವಿವಾಹ ನೆರವೇರಿದ್ದು, ಮದುವೆಯಲ್ಲಿ ಸ್ವತಃ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪಾಲ್ಗೊಂಡು ವದು ವರರನ್ನು ಆಶಿರ್ವದಿಸಿದ ಕುತೂಹಲಕರ ಸಂಗತಿ ಬೆಳಕಿಗೆ ಬಂದಿದೆ.

ಬೆಳಗಾವಿಯ ಶಗುನ ಗಾರ್ಡನ್ ನಲ್ಲಿ  ಕವಟಗಿಮಠ ಪುತ್ರಿಯ ವಿವಾಹ ನೆರವೇರಿತು. ಯಡಿಯೂರಪ್ಪ ಮದುವೆಯಲ್ಲಿ ಪಾಲ್ಗೊಂಡರು. ಮುಖ್ಯಮಂತ್ರಿ ಹಿಂದೆ ಅವರ ಭದ್ರತೆ, ಶಿಷ್ಟಾಚಾರ ಸಿಬ್ಬಂದಿ ಸಹ ಪಾಲ್ಗೊಂಡಿತ್ತು. ಮದುವೆಯಲ್ಲಿ ಜನ ಜಂಗುಳಿಯೇ ನೆರೆದಿದತ್ತು. ಸುಮಾರು ನಾಲ್ಕರಿಂದ ಐದು ಸಾವಿರ ಮಂದಿ ಮದುವೆಯಲ್ಲಿ ಪಾಲ್ಗೊಂಡಿದ್ದರು.

ವಿವಾಹ ಮಹೋತ್ಸವದಲ್ಲಿ ಸರ್ಕಾರದ ನಿರ್ದೇಶನ ಮೀರಿ ವಿವಾಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಂಡ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಲು ಸ್ವತಃ ಯಡಿಯೂರಪ್ಪ ಗಲಿಬಿಲಿಗೊಂಡ ಪ್ರಸಂಗ ಸಹ ಸಂಭವಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com