ಚಾಮುಂಡಿ ಬೆಟ್ಟದಲ್ಲಿ ಅಗ್ನಿ ರೌದ್ರವತಾರ: 10 ಎಕರೆ ಕಾಡು ನಾಶ

ಮೈಸೂರಿನ ಲಲಿತಾದ್ರಿಪುರದ ಬಳಿಯ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರಿ ಬೆಂಕಿ ದುರಂತ ಸಂಭವಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಚಾಮುಂಡಿ ಬೆಟ್ಟ
ಚಾಮುಂಡಿ ಬೆಟ್ಟ

ಮೈಸೂರು: ಮೈಸೂರಿನ ಲಲಿತಾದ್ರಿಪುರದ ಬಳಿಯ ಚಾಮುಂಡಿ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಬುಧವಾರ ಭಾರಿ ಬೆಂಕಿ ದುರಂತ ಸಂಭವಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳ ಪ್ರಕಾರ, ಸುಮಾರು 10 ಎಕರೆ ಪ್ರದೇಶದಲ್ಲಿನ  ಕಾಡು ಬೆಂಕಿಯಲ್ಲಿ ಪೂರ್ಣ ಸುಟ್ಟುಹೋಗಿದೆ .

ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com