ಬೆಂಗಳೂರು: ತಾಯ್ನಾಡಿಗೆ ಮರಳಲು ಪರದಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳ ನೆರವಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧಾವಿಸಿದ್ದಾರೆ.
ಕೊರೋನಾ ಸಂಕಷ್ಟದ ಕಾರಣದಿಂದ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳು ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಗೆ ಮರಳಲು ಪರದಾಡುತ್ತಿದ್ದರು. ತಮ್ಮ ನೆರವಿಗೆ ಬರುವಂತೆ ಮುಖ್ಯಮಂತ್ರಿಗಳನ್ನು ಕೋರಿದ್ದರು.
ವಿದ್ಯಾರ್ಥಿಗಳ ಮನವಿಗೆ ತುರ್ತಾಗಿ ಸ್ಪಂದಿಸಿದ ಮುಖ್ಯಮಂತ್ರಿ ನಾಲ್ವರು ವಿದ್ಯಾರ್ಥಿಗಳಿಗೆ ಏರ್ ಟಿಕೆಟ್ ಬುಕ್ ಮಾಡಿಸಿಕೊಟ್ಟು ಅವರು ತಾಯ್ನಾಡಿಗೆ ಮರಳಲು ಅನುವು ಮಾಡಿಕೊಟ್ಟಿದ್ದಾರೆ. ಈ ವಿಚಾರವನ್ನು ಟ್ವೀಟರ್ ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಂಚಿಕೊಂಡಿದ್ದಾರೆ.
Advertisement