ನಾಳೆ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ -ಎಸ್ . ಸುರೇಶ್ ಕುಮಾರ್ 

ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ  ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ  ಕೊನೇ ಪರೀಕ್ಷೆ (ಇಂಗ್ಲಿಷ್‌) ಮೂಂದೂಡಿರುವ ಕುರಿತು ಶಿಕ್ಷಣ ಸಚಿವ ಎಸ್ ಸುರೇಶ್‌ ಕುಮಾರ್ ತಿಳಿಸಿದ್ದಾರೆ. 
ಸಚಿವ ಎಸ್. ಸುರೇಶ್ ಕುಮಾರ್
ಸಚಿವ ಎಸ್. ಸುರೇಶ್ ಕುಮಾರ್

ಬೆಂಗಳೂರು:  ಕೊರೋನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ  ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ  ಕೊನೇ ಪರೀಕ್ಷೆ (ಇಂಗ್ಲಿಷ್‌) ಮೂಂದೂಡಿರುವ ಕುರಿತು ಶಿಕ್ಷಣ ಸಚಿವ ಎಸ್ ಸುರೇಶ್‌ ಕುಮಾರ್ ತಿಳಿಸಿದ್ದಾರೆ. 

ಕೊರೋನಾ ಸೋಂಕಿನ ಪರಿಣಾಮ ದಿಗ್ಬಂಧನ ಹೇರಲಾಗಿರುವ  ರಾಜ್ಯದ 9 ಜಿಲ್ಲೆಗಳಿ ಪೈಕಿಯಲ್ಲಿ  ನಾಲ್ಕು ಜಿಲ್ಲೆಗಳು ಗಡಿ ಜಿಲ್ಲೆಗಳಾಗಿವೆ. ಈ ಹಿನ್ನೆಲೆಯಲ್ಲಿ ಯಾವುದೇ ಒಬ್ಬ ವಿದ್ಯಾರ್ಥಿಯ ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಪಿಯುಸಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಏಪ್ರಿಲ್‌ 1ರ ನಂತರ ಉಳಿದಿರುವ ಒಂದು ಪರೀಕ್ಷೆಯನ್ನು ಯಾವ ದಿನಾಂಕದಂದು ನಡೆಸಬೇಕು ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ದಿನಾಂಕವನ್ನು ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಸಚಿವರ ಜೊತೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com