ಬಿಎಸ್ ಯಡಿಯೂರಪ್ಪ ಸಭೆ
ಬಿಎಸ್ ಯಡಿಯೂರಪ್ಪ ಸಭೆ

ಕರ್ನಾಟಕದಲ್ಲಿ ಕೊರೋನಾ ರೌದ್ರಾವತಾರ: ಇಂದು ಒಂದೇ ದಿನ 7 ಮಂದಿಗೆ ಸೋಂಕು, ರಾಜ್ಯದಲ್ಲಿ 33 ಪ್ರಕರಣ!

ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ತನ್ನ ಕದಂಬಬಾಹುವನ್ನು ಚಾಚುತ್ತಿದ್ದು ಇಂದು ಒಂದೇ ದಿನ 7 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. 

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ತನ್ನ ಕದಂಬಬಾಹುವನ್ನು ಚಾಚುತ್ತಿದ್ದು ಇಂದು ಒಂದೇ ದಿನ 7 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. 

ದುಬೈನಿಂದ ಬೆಂಗಳೂರಿಗೆ ವಾಪಸ್ಸಾಗಿದ್ದ ಕೇರಳ ಮೂಲದ 46 ವರ್ಷದ ವ್ಯಕ್ತಿ ಹಾಗೂ 38 ವರ್ಷದ ವ್ಯಕ್ತಿಯಲ್ಲೂ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಅವರನ್ನು ಬೆಂಗಳೂರಿನಲ್ಲೇ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಬೆಂಗಳೂರು ಒಂದರಲ್ಲೇ 23 ಪ್ರಕರಣಗಳು ಪತ್ತೆಯಾಗಿದೆ. ಕಲಬುರಗಿ 3, ಮೈಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ 2, ಕೊಡಗು, ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ 33 ಪ್ರಕರಣಗಳು ದೃಢಪಟ್ಟಿವೆ.

ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ರಾಜ್ಯ ಮೂರನೇ ಸ್ಥಾನದಲ್ಲಿದೆ. 

Related Stories

No stories found.

Advertisement

X
Kannada Prabha
www.kannadaprabha.com