ಇಡೀ ಕರ್ನಾಟಕ ಲಾಕ್ ಡೌನ್, ಸಿಎಂ ಬಿಎಸ್ ಯಡಿಯೂರಪ್ಪರಿಂದ ಮಹತ್ವದ ಆದೇಶ!

ರಾಜ್ಯದಲ್ಲಿ ಕೇವಲ 9 ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್ ಮಾಡಬೇಕೆಂದಿತ್ತು. ಆದರೆ ಇದೀಗ ಸಂಪೂರ್ಣ ಕರ್ನಾಟಕವನ್ನೇ ಲಾಕ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕೇವಲ 9 ಜಿಲ್ಲೆಗಳಲ್ಲಿ ಮಾತ್ರ ಲಾಕ್ ಡೌನ್ ಮಾಡಬೇಕೆಂದಿತ್ತು. ಆದರೆ ಇದೀಗ ಸಂಪೂರ್ಣ ಕರ್ನಾಟಕವನ್ನೇ ಲಾಕ್ ಡೌನ್ ಮಾಡಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಹತ್ವದ ಆದೇಶ ಹೊರಡಿಸಿದ್ದಾರೆ.

ಕೊರೋನಾ ವೈರಸ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಯಡಿಯೂರಪ್ಪನವರು ರಾಜ್ಯಾದ್ಯಂತ ಕರ್ಫ್ಯೂ ವಿಧಿಸಿರುವುದಾಗಿ ಟ್ವೀಟರ್ ನಲ್ಲಿ ಸ್ಪಷ್ಟಪಡಿಸಿದ್ದಾರೆ. ನಾಳೆಯಿಂದ ಮಾರ್ಚ್ 31ರವರೆಗೆ ಕರ್ನಾಟಕ ಲಾಕ್ ಡೌನ್ ಆಗಲಿದೆ.

ಬೆಂಗಳೂರು ಒಂದರಲ್ಲೇ 23 ಪ್ರಕರಣಗಳು ಪತ್ತೆಯಾಗಿದೆ. ಕಲಬುರಗಿ 3, ಮೈಸೂರು ಮತ್ತು ಚಿಕ್ಕಬಳ್ಳಾಪುರದಲ್ಲಿ 2, ಕೊಡಗು, ಧಾರವಾಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಲಾ 1 ಪ್ರಕರಣಗಳು ದಾಖಲಾಗಿದ್ದು ಒಟ್ಟಾರೆ 33 ಪ್ರಕರಣಗಳು ದೃಢಪಟ್ಟಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com