ಲಾಕ್ ಡೌನ್: ಬಡವರು, ನಿರ್ಗತಿಕರಿಗೆ ಆಹಾರ ಭದ್ರತೆ ಒದಗಿಸಿ, ಸರ್ಕಾರಕ್ಕೆ ಹೈಕೋರ್ಟ್ ಆದೇಶ

ದೇಶದಲ್ಲಿ ಜಾರಿಯಾಗಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೂಲಿ, ವಲಸೆ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಆಹಾರ ಭದ್ರತೆ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.
ಮಾರ್ಕೆಟ್
ಮಾರ್ಕೆಟ್

ಬೆಂಗಳೂರು: ದೇಶದಲ್ಲಿ ಜಾರಿಯಾಗಿರುವ ಲಾಕ್ ಡೌನ್ ಹಿನ್ನೆಲೆಯಲ್ಲಿ ಕೂಲಿ, ವಲಸೆ ಕಾರ್ಮಿಕರು ಹಾಗೂ ನಿರ್ಗತಿಕರಿಗೆ ಆಹಾರ ಭದ್ರತೆ ಕಲ್ಪಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಮುಖ್ಯ ನ್ಯಾಯಮೂರ್ತಿಗಳಿಗೆ ಬರೆದ ಪತ್ರವನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿಗಣಿಸಿದ ನ್ಯಾಯಾಲಯ ಈ ನಿರ್ದೇಶನ ನೀಡಿದೆ.

ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಬಡಜನರು, ನಿರ್ಗತಿಕರಿಗೆ ಉಂಟಾಗಿರುವ ಸಮಸ್ಯೆ ಕುರಿತು ವಿಚಾರಣೆ ನಡೆಸಿದ ಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com