ಕಡಬ: ಶಾಸಕ ಎಸ್.ಅಂಗಾರ ಅವರು ದಿಢೀರ್ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಾಕ್ ಡೌನ್ ಹಿನ್ನಲೆಯಲ್ಲಿ ಕೈಗೊಳ್ಳಬೆಕಾದ ಕ್ರಮಗಳ ಕುರಿತು ಕಡಬದಲ್ಲಿ ಸಭೆ ನಡೆಸಿದ್ದ ಅಂಗಾರರು ಬಳಿಕ ಕಡಬ ಸಹಕಾರಿ ಸಂಘಕ್ಕೆ ಹೋಗಿ ಪಡಿತರ ವಿತರಣೆಗೆ ಸಂಬಂಧಿಸಿ ಮಾಹಿತಿ ಪಡೆಯುತ್ತಿದ್ದರು.
ಈ ಸಂದರ್ಭದಲ್ಲಿ ಅಸ್ವಸ್ಥಗೊಂಡ ಅವರನ್ನು ಕಡಬ ಆಸ್ಪತ್ರೆಗೆ ಕೊಂಡೊಯ್ದಾಗ ರಕ್ತದೊತ್ತಡ ಕಡಿಮೆಯಾಗಿದ್ದು ಕಂಡು ಬಂತು. ಕೂಡಲೇ ವೈದ್ಯರು ಅವರಿಗೆ ಅಗತ್ಯ ಚಿಕಿತ್ಸೆ ನೀಡಿದ್ದಾರೆ.
Advertisement