ಕೊರೋನಾ: ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳ ನೆರವು ನೀಡಿದ ಸುಧಾ ಮೂರ್ತಿ

ಮಾರಕ ಕೊರೋನಾ ಸೋಂಕು ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ನೆರವು ನೀಡಿದ್ದಾರೆ.
ಕೊರೋನಾ: ದಕ್ಷಿಣ ಕನ್ನಡ ಜಿಲ್ಲೆಗೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಲಕರಣೆಗಳ ನೆರವು ನೀಡಿದ ಸುಧಾ ಮೂರ್ತಿ
Updated on

ಮಂಗಳೂರು: ಮಾರಕ ಕೊರೋನಾ ಸೋಂಕು ನಿಯಂತ್ರಿಸಲು ದಕ್ಷಿಣ ಕನ್ನಡ ಜಿಲ್ಲೆಗೆ ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥೆ ಸುಧಾ ಮೂರ್ತಿ ನೆರವು ನೀಡಿದ್ದಾರೆ.


ಕೊರೋನಾ ಸೋಂಕು ನಿಗ್ರಹ ಹಾಗೂ ಪರೀಕ್ಷೆಗೆ ಅನುಕೂಲವಾಗುವಂತೆ 28 ಲಕ್ಷ ರೂ. ಮೌಲ್ಯದ ವೈದ್ಯಕೀಯ ಸಾಮಗ್ರಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಸುಧಾ ಮೂರ್ತಿಯವರು ದೇಣಿಗೆಯಾಗಿ ನೀಡಿದ್ದಾರೆ. ಮಂಗಳೂರು ಪೊಲೀಸರ ಕರೆಗೆ ಮೂರ್ತಿ ಸ್ಪಂದಿಸಿದ್ದು, 36 ಗಂಟೆಗಳಲ್ಲಿ 28 ಲಕ್ಷ ರೂಪಾಯಿ ಮೌಲ್ಯದ ನಿರ್ಣಾಯಕ ವೈದ್ಯಕೀಯ ಸರಬರಾಜು ಜಿಲ್ಲೆಗೆ ತಲುಪಿದೆ.


ದಕ್ಷಿಣ ಕನ್ನಡ ಜಿಲ್ಲಾಡಳಿತದ ಪರವಾಗಿ ಮಂಗಳೂರು ಪೊಲೀಸರ ಕರೆಗೆ ಎಂ.ಎಸ್.ಸುಧಾ ಮೂರ್ತಿ ಪ್ರತಿಕ್ರಿಯಿಸಿದ್ದಾರೆ ಮತ್ತು 36 ಗಂಟೆಯೊಳಗೆ 28 ಲಕ್ಷ ರೂಪಾಯಿಗಳ ವಿಮರ್ಶಾತ್ಮಕ ವೈದ್ಯಕೀಯ ಸರಬರಾಜು ಮಂಗಳೂರಿಗೆ ತಲುಪಿದೆ ಎಂದು ನಗರ ಪೊಲೀಸ್ ಆಯುಕ್ತ ಹರ್ಷ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಸಾಮಗ್ರಿಗೊಳೊಡನೆ ಸಹಾಯ ಮಾಡುವುದಾಗಿ ಸರ್ಕಾರಕ್ಕೆ ನೀಡಿದ ಭರವಸೆಯನ್ನು ನೆರವೇರಿಸಿದ ಸುಧಾಮೂರ್ತಿಯವರಿಗೆ ಧನ್ಯವಾದಗಳು ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com