ಉಪ್ಪಿನಂಗಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ, ಅನಿಲ ಸೋರಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ಅನಿಲ ಸಾಗಿಸುವ ಬುಲೆಟ್ ಟ್ಯಾಂಕರೊಂದು ಶನಿವಾರ ಮುಂಜಾನೆ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆಯಾಗಿದೆ.
ಉಪ್ಪಿನಂಗಡಿ : ಗ್ಯಾಸ್ ಟ್ಯಾಂಕರ್ ಪಲ್ಟಿ
ಉಪ್ಪಿನಂಗಡಿ : ಗ್ಯಾಸ್ ಟ್ಯಾಂಕರ್ ಪಲ್ಟಿ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಡಿ ಸಮೀಪದ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬೆದ್ರೋಡಿ ತಿರುವಿನಲ್ಲಿ ಅನಿಲ ಸಾಗಿಸುವ ಬುಲೆಟ್ ಟ್ಯಾಂಕರೊಂದು ಶನಿವಾರ ಮುಂಜಾನೆ ಪಲ್ಟಿಯಾಗಿದೆ. ಈ ವೇಳೆ ಟ್ಯಾಂಕರ್ ಹಾನಿಗೀಡಾಗಿದ್ದು, ಅನಿಲ ಸೋರಿಕೆಯಾಗಿದೆ.

ಶನಿವಾರ ಮುಂಜಾನೆ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ಮಗುಚಿ ರಸ್ತೆ ಬದಿಗೆ ಬಿದ್ದಿದೆ. ಈ ವೇಳೆ ಚಾಲಕ ಅಪಾಯದಿಂದ ಪಾರಾಗಿದ್ದು, ಅನಿಲ ಸೋರಿಕೆ ಉಂಟಾಗಿದೆ. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾರ್ಯಚರಣೆ ನಡೆಸಲಾಯಿತು.

ಘಟನೆಯ ಹಿನ್ನೆಲೆಯಲ್ಲಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಯಿತು. ಇಂದು ದ.ಕ . ಜಿಲ್ಲೆಯಲ್ಲಿ ಪೂರ್ಣ ಬಂದ್ ಇದ್ದ ಕಾರಣ ರಸ್ತೆಯಲ್ಲಿ ವಾಹನ ಸಂಚಾರ ಕನಿಷ್ಠ ಪ್ರಮಾಣದಲ್ಲಿತ್ತು.

ಸ್ಥಳಕ್ಕೆ ಎಚ್.ಪಿ. ತುರ್ತು ನಿರ್ವಹಣಾ ದಳ, ಅಗ್ನಿಶಾಮಕ ದಳ, ಹಾಗೂ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ, ಅನಿಲ ಸೋರಿಕೆ ತಡೆಗಟ್ಟುವ ಕಾರ್ಯಚರಣೆ ನಡೆಸಿದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com