ಮೈಸೂರು: ಮೈಸೂರಿನ ನಂಜನಗೂಡು ಸದ್ಯ ಕೊರೋನಾ ವೈರಸ್ ಅತೀ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿದ್ದು ಇದರ ನಡುವೆ ಮಹಿಳಾ ಪಿಎಸ್ಐ ಒಬ್ಬರು ಪೆಟ್ರೋಲ್ ಬಂಕ್ಗೆ ಬೆಂಕಿ ಹಚ್ಚುತ್ತೇನೆ ಎಂದು ದರ್ಪ ಮೆರೆದಿದ್ದಾರೆ.
ನಂಜನಗೂಡು ಪಟ್ಟಣದ ಹುಲ್ಲಹಳ್ಳಿ ವೃತ್ತದಲ್ಲಿರುವ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ನಲ್ಲಿ ಬಲವಂತವಾಗಿ ಬಂಕ್ ಮುಚ್ಚುವಂತೆ ಬೆದರಿಸಿರುವ ಮಹಿಳಾ ಪಿಎಸ್ಐ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ.
ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸ್ ಜೀಪ್ ಗೆ ಡೀಸೆಲ್ ಹಾಕುವುದಿಲ್ಲ ಎಂದು ಬಂಕ್ ಸಿಬ್ಬಂದಿ ಹೇಳಿದ್ದರಿಂದ ನಂಜನಗೂಡು ಗ್ರಾಮಾಂತರ ಠಾಣೆ ಸಬ್ ಇನ್ಸ್ ಪೆಕ್ಟರ್ ಯಾಸ್ಮಿನ್ ತಾಜ್ ಅವರು ಸಿಬ್ಬಂದಿಗೆ ಅವಾಜ್ ಹಾಕಿದ್ದಾರೆ.
ಪೆಟ್ರೋಲ್ ಬಂಕ್ ಸಿಬ್ಬಂದಿ ಖಾಸಗಿ ವಾಹನಗಳಿಗೆ ಪೆಟ್ರೋಲ್ ಹಾಕುತ್ತಿದ್ದರು. ಆದರೆ ಪೊಲೀಸರ ಜೀಪಿಗೆ ಪೆಟ್ರೋಲ್ ಹಾಕಲು ನಿರಾಕರಿಸಿದ್ದರಿಂದ ಪಿಎಸ್ಐ ಗರಂ ಆಗಿದ್ದಾರೆ.
Advertisement