ಬೆಂಗಳೂರು: ವಲಸೆ ಕಾರ್ಮಿಕರಿಗೆ ತಮ್ಮ ತಮ್ಮ ಊರುಗಳಿಗೆ ತೆರಳಲು ಸರ್ಕಾರ ಅನುಮತಿ ನೀಡಿರುವ ಬೆನ್ನಲ್ಲೇ ಹೊರ ಹೋಗುತ್ತಿರುವ ಕಾರ್ಮಿಕರಿಗೆ ಶಿಷ್ಟಾಚಾರದಂತೆ ಕಡ್ಡಾಯ ಆರೋಗ್ಯ ತಪಾಸಣೆ ಮಾಡಲಾಗುತ್ತದೆ.
ಗೃಹ ಇಲಾಖೆ ಮಾರ್ಗಸೂಚಿಗಳಿಗೆ ಅನುಗುಣವಾಗಿ, ಬೆಂಗಳೂರಿನಲ್ಲಿರುವ ಸಿಲುಕಿರುವ ವಲಸಿಗರು, ಪ್ರವಾಸಿಗರು, ವಿದ್ಯಾರ್ಥಿಗಳು, ಯಾತ್ರಿಕರು ಇತ್ಯಾದಿಗಳ ಸಂಚಾರಕ್ಕೆ ಅನುಕೂಲವಾಗುವಂತೆ ರಾಜ್ಯವು ಇತರ ರಾಜ್ಯಗಳೊಂದಿಗೆ ಸಂಪರ್ಕದಲ್ಲಿದೆ.
ಬಸ್ ಸಂಚಾರ ಆರಂಭದ ಸುದ್ದಿ ಕೇಳುತ್ತಿದ್ದಂತೆಯೇ ನೂರಾರು ವಲಸೆ ಕಾರ್ಮಿಕರು ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಜಮಾಯಿಸಿದರು. ಹೀಗಾಗಿ
ಅಲ್ಲಿಯೇ ವಲಸೆ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಕೂಡ ಮಾಡಲಾಗುತ್ತಿದೆ. ಪ್ರತಿಯೊಬ್ಬರನ್ನೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ನಂತರ ಬಸ್ ಹತ್ತಲು ಸೂಚನೆ ನೀಡಲಾಗುತ್ತಿದೆ. ಈ ಕಾರ್ಮಿಕರು ತೆರಳಲು ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.
ರಾಜ್ಯ ಬಿಟ್ಟು ಹೊರಡುವವರು htt.ps://sevasindhu.karnataka.gov.in. ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಿ ಅನುಮತಿ ನೀಡಬೇಕಾಗಿದೆ.ಎಲ್ಲಾ ಅಪ್ಲಿಕೇಶನ್ಗಳಿಗೆ ಅನನ್ಯ ಐಡಿ ಸಂಖ್ಯೆಯನ್ನು ನೀಡಲಾಗುವುದು. ಅರ್ಜಿಗಳನ್ನು ರಾಜ್ಯವ್ಯಾಪಿ ವಿಂಗಡಿಸಲಾಗುವುದು ಮತ್ತು ಪ್ರತಿ ರಾಜ್ಯಕ್ಕೆ ನೋಡಲ್ ಅಧಿಕಾರಿಗಳು ಸ್ವೀಕರಿಸುವ ರಾಜ್ಯದೊಂದಿಗೆ ಸಮನ್ವಯ
ಸಾಧಿಸಲಿದ್ದಾರೆ.
ಸ್ಥಳಾಂತರಗೊಳ್ಳಲು ಅನುಮತಿ ಪಡೆದವರನ್ನು ಆರೋಗ್ಯ ಅಧಿಕಾರಿಗಳು ಪರೀಕ್ಷಿಸುತ್ತಾರೆ ಮತ್ತು ಸ್ಕ್ರೀನಿಂಗ್ ಅನ್ನು ತೆರವುಗೊಳಿಸಿದವರಿಗೆ ಪ್ರಯಾಣಿಸಲು ಅವಕಾಶವಿರುತ್ತದೆ. ಕೆಎಸ್ಆರ್ಟಿಸಿ, ಎನ್ಇಕೆಆರ್ಟಿಸಿ, ಎನ್ಡಬ್ಲ್ಯೂಕೆಆರ್ಟಿಸಿ ಗಳು ಬಸ್ ವ್ಯವಸ್ಥೆ ಮಾಡಿ ರಾಜ್ಯಗಳ ನೋಡಲ್ ಅಧಿಕಾರಿಗಳೊಂದಿಗೆ ಸಮನ್ವಯದಿಂದ ನಿರ್ದಿಷ್ಟ ಸ್ಥಳಗಳಿಗೆ ಬಸ್ಗಳನ್ನು ಆಯೋಜಿಸುತ್ತದೆ.
ಬಸ್ ನಲ್ಲಿ ಸ್ಯಾನಿಟೈಸನ್ ಮಾಡಲಾಗಿದ್ದು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಜಿಲ್ಲೆಯು ಒಂದು ನಿರ್ಗಮನ ಸ್ಥಳವನ್ನು ಗುರುತಿಸುತ್ತದೆ ಅದು ಪ್ರವೇಶ ದ್ವಾರ ಇರುತ್ತದೆ.
ನೀರು, ಆಹಾರ, ತಾತ್ಕಾಲಿಕ ಆಶ್ರಯ, ಶೌಚಾಲಯ ಇತ್ಯಾದಿ ಸೌಲಭ್ಯಗಳೊಂದಿಗೆ ಜಿಲ್ಲಾ ಪ್ರವೇಶ ಕೇಂದ್ರಗಳಲ್ಲಿ ಸ್ಕ್ರೀನಿಂಗ್ಗಾಗಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು.
ಸೀಟ್ಗಳುಳ್ಳ ಬಸ್ಸಿನಲ್ಲಿ ಕೇವಲ 30 ಜನರಿಗೆ ಮಾತ್ರ ಪ್ರಯಾಣ ಮಾಡಲು ಅವಕಾಶವನ್ನ ನೀಡಲಾಗಿದೆ. ಟಿಕೆಟ್ ದರ ನಿಗದಿತ ಬೆಲೆಗಿಂತ ಒಂದು ಪಟ್ಟು ಹೆಚ್ಚು ಮಾಡಲಾಗಿದ್ದು, ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಡ್ಡಾಯ ಮಾಡಲಾಗಿದೆ.
ಕೊರೊನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಒಂದು ಬಸ್ಸಿನಲ್ಲಿ ಕೇವಲ 30 ಜನ ಪ್ರಯಾಣಿಸಲು ಅವಕಾಶ ನೀಡಲಾಗಿದೆ. ಅಷ್ಟೇ ಅಲ್ಲದೆ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಹೊರಟ ಬಸ್ಸುಗಳು ವಾಪಸ್ ಬರುವಾಗ ಖಾಲಿ ಬರುತ್ತವೆ.
Advertisement