ಮೇ 4 ರಿಂದ ಕೈಗಾರಿಕೆಗಳ ಪುನರಾರಂಭ: ಜಗದೀಶ್ ಶೆಟ್ಟರ್

ಮೇ 4 ರಿಂದ ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಉಳಿದ ಎಲ್ಲಾ ವಲಯಗಳಲ್ಲಿ ಎಲ್ಲಾ ರೀತಿಯ ಕೈಗಾರಿಕೆ ಆರಂಭಕ್ಕೆ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್

ಬೆಳಗಾವಿ:  ಮೇ 4 ರಿಂದ ಕಂಟೈನ್ಮೆಂಟ್ ಜೋನ್ ಹೊರತು ಪಡಿಸಿ ಉಳಿದ ಎಲ್ಲಾ ವಲಯಗಳಲ್ಲಿ ಎಲ್ಲಾ ರೀತಿಯ ಕೈಗಾರಿಕೆ ಆರಂಭಕ್ಕೆ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು,ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರಿಗೆ ಸ್ವಯಂ ಘೋಷಣಾ ಪತ್ರ ಸಲ್ಲಿಸಿ ಕೈಗಾರಿಕೆ ಆರಂಭಿಸಬಹುದು ಎಂದು ತಿಳಿಸಿದ್ದಾರೆ.

ಕೈಗಾರಿಕೆಗಳ ಆರಂಭಕ್ಕೆ ಎಲ್ಲಾ ರೀತಿಯ ಅಗತ್ಯ ನೆರವು ನೀಡಲು ಸರ್ಕಾರ ಸಿದ್ದವಿದೆ, ಸಣ್ಣ ಕೈಗಾರಿಕೆಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆಗೆ ಈಗಾಗಲೇ ಪ್ರಸ್ತಾವ ಕೂಡ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

ಕೊರೋನಾ ವೈರಸ್ ಅನ್ನು ಎಲ್ಲರು ಒಟ್ಟಾಗಿ ಎದುರಿಸಬೇಕಾಗಿದೆ ಎಂದ ಅವರು ವಿದ್ಯುತ್ ಬಿಲ್ ಪಾವತಿಸಲು ಕಾಲಾವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com