ಬೆಂಗಳೂರು: ತಮ್ಮ ಪ್ರಾಣವನ್ನು ಲೆಕ್ಕಿಸದೆ ವೈದ್ಯರು, ಆರೋಗ್ಯ ಸಿಬ್ಬಂದಿಗಳು ಕೊರೋನಾ ವಿರುದ್ಧದ ಸಮರದಲ್ಲಿ ಕಾರ್ಯಪೌರುತ್ತರಾಗಿದ್ದರೆ. ಇದರ ಮಧ್ಯೆ ನರ್ಸ್ ಆಗಿರುವ 9 ತಿಂಗಳ ತುಂಬು ಗರ್ಭಿಣಿ ಸಹ ಕರ್ತವ್ಯ ನಿಭಾಯಿಸುತ್ತಿದ್ದು ಅದಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ದೂರವಾಣಿ ಕರೆ ಮಾಡಿ ಶ್ಲಾಘಿಸಿದ್ದಾರೆ.
ತೀರ್ಥಹಳ್ಳಿಯ ಜಯಚಾಮರಾಜೇಂದ್ರ ತಾಲೂಕು ಆಸ್ಪತ್ರೆಯಲ್ಲಿ ನರ್ಸ್ ಆಗಿ ರೂಪ ಕಾರ್ಯನಿರ್ವಹಿಸುತ್ತಿದ್ದಾರೆ. ದಿನಂಪ್ರತಿ 120 ಕಿ.ಮೀ ಪ್ರಯಾಣಿಸುತ್ತಿದ್ದು ಅವರಿಗೆ ಸಿಎಂ ಕರೆ ಮಾಡಿ ಅಭಿನಂದಿಸಿದರು. ಇದರ ಜೊತೆಗೆ ಇಂದಿನಿಂದಲ್ಲೇ ವಿಶ್ರಾಂತಿ ಪಡೆಯಿರಿ ಎಂದು ಸೂಚಿಸಿದ್ದಾರೆ.
ಶಿವಮೊಗ್ಗದ ಗಾಜನೂರು ಗ್ರಾಮದಿಂದ 60 ಕಿ.ಮೀ ದೂರವಿರುವ ತೀರ್ಥಹಳ್ಳಿ ಪಟ್ಟಣಕ್ಕೆ ಪ್ರತಿದಿನ ಬಸ್ ನಲ್ಲೇ ಪ್ರಯಾಣಿಸಿ ರೂಪ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.
Advertisement