ಬೆಂಗಳೂರು: ಜಯ ಕರ್ನಾಟಕ ಸಂಘಟನೆಯ ಸ್ಥಾಪಕ. ಮಾಜಿ ಭೂಗತ ದೊರೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿ ಗ್ರಂಭೀರವಾಗಿದೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಮುತ್ತಪ್ಪ ರೈ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುವಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ.
ಮುತ್ತಪ್ಪ ರೈ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಬೆನ್ನಲ್ಲೇ ಅವರ ನಿಧನದ ಕುರಿತು ಸುಳ್ಳು ಸುದ್ದಿ, ವದಂತಿಗಳು ಹರಡುತ್ತಿದೆ. ನಾಳೆ ಮುತ್ತಪ್ಪ ರೈ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಪ್ರಕಟವಾಗಲಿದೆ ಎಂದು ಪೂರ್ವ ವಲಯ ಡಿಸಿಪಿ ಶರಣಪ್ಪ ಮಾಹಿತಿ ನೀಡಿದ್ದಾರೆ.
Advertisement