ಆತ್ಮಹತ್ಯೆ
ಆತ್ಮಹತ್ಯೆ

ಕೊಳ್ಳೇಗಾಲದಲ್ಲಿ ಪೇದೆಯ ಪತ್ನಿ ನೇಣಿಗೆ ಶರಣು: ಕಾರಣ ನಿಗೂಢ 

ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.

ಕೊಳ್ಳೇಗಾಲ: ಪೊಲೀಸ್ ಪೇದೆಯ ಪತ್ನಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಕೊಳ್ಳೆಗಾಲದಲ್ಲಿ ಶನಿವಾರ ನಡೆದಿದೆ.

ಕೊಳ್ಳೇಗಾಲದ ಪಟ್ಟಣ ಪೊಲೀಸ್ ಠಾಣೆಯ ಪೇದೆ ಪರುಶುರಾಮ್ ಎಂಬುವವರ ಪತ್ನಿ ನಾಗರತ್ನ (19 ವರ್ಷ) ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಪರಶುರಾಮ್ ಮೂಲತಃ ರಾಯಚೂರಿನವರಾಗಿದ್ದು, ಕಳೆದ 3-4 ವರ್ಷಗಳಿಂದ ಪೊಲೀಸ್ ಪೇದೆಯಾಗಿ ಕೆಲಸ  ನಿರ್ವಹಿಸುತ್ತಿದ್ದಾರೆ. ಅದೇ ಜಿಲ್ಲೆಯ ತನ್ನ ಸಂಬಂಧಿಕರಾದ ನಾಗರತ್ನ ಅವರನ್ನು ಒಂದು ವರ್ಷದ‌ ಹಿಂದೆ ಮದುವೆಯಾಗಿ ಇಲ್ಲಿನ ಪೊಲೀಸ್ ವಸತಿ ಗೃಹದಲ್ಲಿ ವಾಸವಾಗಿದ್ದರು.

ಎಂದಿನಂತೆ ಕರ್ತವಕ್ಕೆ ತೆರಳಿ ಮಧ್ಯಾಹ್ನ ಊಟದ ಸಮಯದಲ್ಲಿ ಮನೆಗೆ ಹಿಂತಿರುಗಿದಾಗ ಮನೆಯ ಬಾಗಿಲು ತೆರೆಯದಿರುವುದನ್ನು ಕಂಡು ಪೇದೆ ಪರಶುರಾಮ್​ ಗಾಬರಿಯಾಗಿದ್ದಾರೆ. ಬಳಿಕ ಬಾಗಿಲು ಒಡೆದು ನೋಡಿದಾಗ ನಾಗರತ್ನ ನೇಣಿಗೆ ಶರಣಾಗಿದ್ದಾಳೆ. ಶವವನ್ನು ಸರ್ಕಾರಿ ಆಸ್ಪತ್ರೆಗೆ  ರವಾನಿಸಲಾಗಿದ್ದು ಮೃತರ ಸಂಬಂಧಿಕರು ಬಂದು ದೂರು ನೀಡಿದ ಮೇಲೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದೆಂದು ಪೊಲೀಸರು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com