ಬೆಂಗಳೂರು: ಕೊರೋನಾ ಸೋಂಕಿನಿಂದ ಹಲವು ದೇಶಗಳಲ್ಲಿ ಸಂಕಷ್ಟಕ್ಕೊಳಗಾಗಿರುವ ಅನಿವಾಸಿ ಭಾರತೀಯರನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರ ಆರಂಭಿಸಿರುವ ವಂದೇ ಭಾರತ ಅಭಿಯಾನದಡಿ ಮೂರನೇ ವಿಮಾನ ಮಸ್ಕತ್ ನಿಂದ ಆಗಮಿಸಿದೆ.
ಈ ಮಧ್ಯೆ ಇದೇ 25 ರಿಂದ ದೇಶೀಯ ವಿಮಾನಗಳು ಸಹ ಸಂಚಾರ ಆರಂಭವಾಗಲಿದ್ದು, ಇದಕ್ಕಾಗಿ ಸಿದ್ಧತೆಗಳು ನಡೆಯುತ್ತಿವೆ.
ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಈ ರಾತ್ರಿ ಆಗಮಿಸಿದ ಈ ವಿಮಾನದಲ್ಲಿ ಒಟ್ಟು ೧೭೮ ಪ್ರಯಾಣಿಕರಿದ್ದರು. ಇವರಲ್ಲಿ ಇಬ್ಬರು ಮಕ್ಕಳು ಸೇರಿದಂತೆ ೧೧೫ ಮಂದಿ ಬೆಂಗಳೂರು ನಿಲ್ದಾಣದಲ್ಲಿ ಇಳಿದಿದ್ದು, ಇವರೆಲ್ಲರನ್ನೂ ಕ್ವಾರೆಂಟೈನ್ ಗೆ ಒಳಪಡಿಸಲಾಗಿದೆ.
Advertisement