ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ

ಒಂದೇ ಕುಟುಂಬದ ಮೂವರು ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪ ತಾಲೂಕಿನ ಸಿಗದಾಳು ಘಾಟಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಕೀಟನಾಶಕವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೊಪ್ಪ ತಾಲೂಕಿನ ಸಿಗದಾಳು ಘಾಟಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕೊಪ್ಪ ತಾಲೂಕಿನ ಉತ್ತಮೇಶ್ವರದ ತಂದೆ ಬಾಬಣ್ಣ(55 ), ಅವರ ಪುತ್ರಿ ಶೈಲಾ(32) ಹಾಗೂ ಮೊಮ್ಮಗಳು ಅನನ್ಯ(11) ಆತ್ಮಹತ್ಯೆಗೆ ಯತ್ನಿಸಿದವರು. 

ಸಿಗದಾಳು ಗ್ರಾಮದಿಂದ ಸುಮಾರು 10 ಕಿ.ಮೀ. ದೂರದ ಘಾಟಿಯಲ್ಲಿನ ಅರಣ್ಯ ಪ್ರದೇಶದಲ್ಲಿ ಕೀಟನಾಶಕ ಔಷಧಿಯನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸ್ಥಳೀಯರು ಕಾಡಿಗೆ ಹೋದಾಗ ನರಳಾಡುತ್ತಿರುವುದನ್ನು ಕಂಡು ಅವರು ಹರಿಹರಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಬಂದ ಹರಿಹರಪುರ ಪೊಲೀಸರು ಸ್ಥಳೀಯರ ಸಹಾಯದಿಂದ ಮೂವರನ್ನೂ ಕೊಪ್ಪ ಸಾರ್ವಜನಿಕ ಆಸ್ವತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ಮಣಿಪಾಲ್ ಆಸ್ವತ್ರೆಗೆ ರವಾನಿಸಲಾಗಿದೆ. ಆದರೆ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ಆತ್ಮಹತ್ಯೆಗೆ ಯತ್ನಿಸಿರುವ ಬಾಬಣ್ಣ ಕೊಪ್ಪದ ಹುಲ್ಲುಮಕ್ಕಿಯಲ್ಲಿ ವಾಸವಿದ್ದರು. ಆ ಮನೆಯನ್ನು ಮಾರಾಟ ಮಾಡಿ ಉತ್ತಮೇಶ್ವರ ಗ್ರಾಮದಲ್ಲಿ ಜಮೀನು ಖರೀದಿಸಿ ವಾಸವಿದ್ದರು ಎಂದು ತಿಳಿದುಬಂದಿದೆ. ಹರಿಹರಪುರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com