ಕೊರೋನಾಗೆ ಕರ್ನಾಟಕ ತತ್ತರ: ಇಂದು ಹೊಸದಾಗಿ 93 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 2,182ಕ್ಕೆ ಏರಿಕೆ!

ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ರಣಕೇಕೆ ಮುಂದುವರೆದಿದ್ದು ಇಂದು ಸಹ ಹೊಸದಾಗಿ 93 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2,182ಕ್ಕೆ ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ರಣಕೇಕೆ ಮುಂದುವರೆದಿದ್ದು ಇಂದು ಸಹ ಹೊಸದಾಗಿ 93 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 2,182ಕ್ಕೆ ಏರಿಕೆಯಾಗಿದೆ.

ಉಡುಪಿ 32, ಕಲಬುರಗಿ 16, ಯಾದಗಿರಿ 15,  ಬೆಂಗಳೂರು 8, ದಕ್ಷಿಣ ಕನ್ನಡ 4, ಧಾರವಾಡ 4, ಬಳ್ಳಾರಿ 3, ಮಂಡ್ಯ 2, ಕೋಲಾರ 2, ಹಾಸನ, ತುಮಕೂರು, ಬೆಳಗಾವಿ, ವಿಜಯಪುರ, ಉತ್ತರಕನ್ನಡ, ರಾಮನಗರದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿವೆ.

ರಾಜ್ಯದಲ್ಲಿ ಇಂದು ಹೊಸದಾಗಿ 93 ಪ್ರಕರಣಗಳು ಪತ್ತೆಯಾಗಿದ್ದು ಇದರೊಂದಿಗೆ ಸೋಂಕಿತರ ಸಂಖ್ಯೆ 2,182ಕ್ಕೆ ಏರಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ 55 ವರ್ಷದ ನಿವಾಸಿ ಭಾನುವಾರ ರಾತ್ರಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 43 ವರ್ಷದ ನಿವಾಸಿ ಮೇ 23ರಂದು ಮೃತಪಟ್ಟಿದ್ದರು. ಅವರಿಗೆ ಕೊರೋನಾ ಸೋಂಕು ತಗುಲಿತ್ತು ಎಂದು ಸೋಮವಾರ ಬಿಡುಗಡೆಯಾದ ವರದಿಯಲ್ಲಿ ದೃಢಪಟ್ಟಿತ್ತು.

2,182 ಪ್ರಕರಣಗಳ ಪೈಕಿ 1,431 ಪ್ರಕರಣಗಳು ಸಕ್ರಿಯವಾಗಿದ್ದು 705 ಮಂದಿ ಗುಣಮುಖರಾಗಿದ್ದಾರೆ.

ಮೂವರು ಅಂತಾರಾಷ್ಟ್ರೀಯ(ದುಬೈ) ಮತ್ತು 73 ಅಂತಾರಾಜ್ಯ ಪ್ರಯಾಣಿಕರಾಗಿದ್ದಾರೆ. ಭಾನುವಾರದಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 17830 ಜನರನ್ನು ತಪಾಸಣೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com