ನಾಗರಹೊಳೆ ರಾಷ್ಟ್ರೀಯ ಉದ್ಯಾನ: ಬುಡಕಟ್ಟು ಜನಾಂಗದವರನ್ನು ಕೊಂದಿದ್ದ ಹುಲಿ ಸೆರೆ

ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಜೇನು ಕುರುಬ ಸಮುದಾಯಕ್ಕೆ ಸೇರಿದ ಬುಡಕಟ್ಟು ಜನಾಂಗದವರನ್ನು ಕೊಂದ ಹುಲಿಯನ್ನು ಮಂಗಳವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸೆರೆಹಿಡಿಯಲಾಗಿದೆ. 

ಈ ಕಾರ್ಯಾಚರಣೆಯಿಂದ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ನೇರಳಕುಪ್ಪೆ ಕುಗ್ರಾಮದ ಸುತ್ತಮುತ್ತಲಿನ ಜನರು ನೆಮ್ಮದಿಯ ನಿಟ್ಟುಸಿರಿಟ್ಟಿದ್ದಾರೆ.

ಕಾರ್ಯಾಚರಣೆಯಲ್ಲಿ ಹುಲಿಯು ಬುಡಕಟ್ಟು ಜನಾಂಗದವನನ್ನು ಕೊಂದ ಸ್ಥಳದಲ್ಲಿ ಪಂಜರವನ್ನು ಇರಿಸಿ, ಅದನ್ನು ಸೆರೆ ಹಿಡಿಯಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಸಿಕ್ಕಿಬಿದ್ದ ಹುಲಿಯನ್ನು ನಗರದ ಹೊರವಲಯದಲ್ಲಿರುವ ಚಾಮುಂಡಿ ಪ್ರಾಣಿ ಪಾರುಗಾಣಿಕಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ಆರೋಗ್ಯ ಸ್ಥಿತಿಯನ್ನು ಪರೀಕ್ಷಿಸಲಾಗುತ್ತಿದೆ.

ಕಳೆದ 10 ದಿನಗಳಲ್ಲಿ ಬಂಡೀಪುರ-ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಸಿಕ್ಕಿಬಿದ್ದ ಮೂರನೇ ಹುಲಿ ಇದಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com