ಮಂಗಳುರು: ಮೇ 31 ರ ಭಾನುವಾರ ನಸುಕಿನ ಜಾವ ಇಲ್ಲಿನ ಕಳ್ಳಪು ಸಮೀಪದ ಸೇತುವೆಯಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿ ಐದು ಮಂದಿ ಗಾಯಗೊಂಡಿದ್ದಾರೆ.
ಮೃತನನ್ನು ಕಾವೂರು ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ.
ಬೆಳಿಗ್ಗೆ 5 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಚೇತನ್ ಕಾರನ್ನು ಓಡಿಸುತ್ತಿದ್ದನೆಂದು ತಿಳಿದುಬಂದಿದೆ. ಆಗ ಹಿಂದಿನಿಂದ ಕಾರು ಆಗಮಿಸಿ ಲಾರಿಗೆ ಗಿದ್ದಿದೆ.
ಅಪಘಾತದಲ್ಲಿ ಕಾರು ಸಂಪೂರ್ಣವಾಗಿ ಜಖಂ ಆಗಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Advertisement