ಕೊಳ್ಳೇಗಾಲ: ವಿವಾಹಿತೆಯೊಂದಿಗೆ ಅಕ್ರಮ ಸಂಬಂಧ, ನೇಣು ಬಿಗಿದು ಯುವಕನ ಕೊಲೆ

ವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಆರೋಪ ಕೇಳಿ ಬಂದಿದೆ. ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ಈ ಘಟನೆ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ವಿವಾಹೇತರ ಸಂಬಂಧ ಕಾರಣಕ್ಕೆ ಯುವಕನೊಬ್ಬನನ್ನು ಕೊಂದು ನೇಣು ಹಾಕಿಕೊಂಡಿದ್ದಾನೆ ಎಂದು ಬಿಂಬಿಸಿರುವ ಆರೋಪ ಕೇಳಿ ಬಂದಿದೆ. ಕೊಳ್ಳೇಗಾಲ ತಾಲೂಕಿನ ಗುಂಡೇಗಾಲದಲ್ಲಿ ಈ ಘಟನೆ ನಡೆದಿದೆ.

ಕೊಳ್ಳೇಗಾಲ ತಾಲೂಕಿನ‌ ಕಂಡಯ್ಯನಪಾಳ್ಯದ ಪ್ರಕಾಶ್(23) ಮೃತ ದುರ್ದೈವಿ. ಈತ ಮಹಿಳೆಯೊಬ್ಬಳ ಜೊತೆ ವಿವಾಹೇತರ ಸಂಬಂಧ ಇರಿಸಿಕೊಂಡಿದ್ದ ಎನ್ನಲಾಗಿದೆ. ಈ ವಿಚಾರ ಪತಿ ಮನೆಯವರಿಗೆ ತಿಳಿದು, ಕಳೆದ 5 ದಿನಗಳ ಹಿಂದೆ ತಮ್ಮ ಕೋಮಿನ ಪಂಚಾಯಿತಿ ಸೇರಿಸಿದ್ದರು ಎಂದು ತಿಳಿದು ಬಂದಿದೆ. 

ಪಂಚಾಯಿತಿಯಲ್ಲಿ ಪ್ರಕಾಶನ ಜೊತೆಯೇ ಇರುವುದಾಗಿ ಮಹಿಳೆ ತಿಳಿಸಿದ್ದರಿಂದ 3 ಲಕ್ಷ ರೂ. ದಂಡ ನೀಡಿ ವಿವಾಹ ಮಾಡಿಕೊಳ್ಳುವಂತೆ ತೀರ್ಪು ನೀಡಲಾಗಿತ್ತು. ಹಣ ಕೊಡುವ ತನಕ ಗುಂಡೇಗಾಲದಲ್ಲೇ ಇರುವಂತೆ ಮನೆಯೊಂದರಲ್ಲಿ ಕೂಡಿಹಾಕಿದ್ದರು ಎನ್ನಲಾಗಿದೆ.

ಪ್ರಕಾಶ್​ನ ಮನೆಯವರು ಹಣ ಹೊಂದಿಸುತ್ತಿರುವ ವಿಚಾರ ತಿಳಿದು ಮಹಿಳೆಯ ಗಂಡ ಮತ್ತು ಸಂಬಂಧಿಕರು ಉಸಿರುಗಟ್ಟಿಸಿ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಕಾಶ್​ನ ತಾಯಿ ಮಂಜುಳಾ ಕೊಳ್ಳೇಗಾಲ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ. ಪ್ರಿಯತಮೆ ಸೇರಿದಂತೆ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

-ನಂದೀಶ್ ಗುಳಿಪುರ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com