ಚಾಮರಾಜನಗರ: ಕಾಡಾನೆ ತುಳಿತಕ್ಕೆ 61 ವರ್ಷದ ವ್ಯಕ್ತಿ ಸಾವು

ಬಿಳಿಗಿರಿ ರಂಗನಾಥ ಮೀಸಲು ಅರಣ್ಯದ ವ್ಯಾಪ್ತಿಗೆ ರಿಸರ್ವ್ ಫಾರೆಸ್ಟ್‌ನ ಹಂಗಲವಾಡಿ ಗ್ರಾಮದಲ್ಲಿ 61 ವರ್ಷದ ವ್ಯಕ್ತಿಯೊಬ್ಬರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಾಮರಾಜನಗರ: ಬಿಳಿಗಿರಿ ರಂಗನಾಥ ಮೀಸಲು ಅರಣ್ಯದ ವ್ಯಾಪ್ತಿಗೆ ರಿಸರ್ವ್ ಫಾರೆಸ್ಟ್‌ನ ಹಂಗಲವಾಡಿ ಗ್ರಾಮದಲ್ಲಿ 61 ವರ್ಷದ ವ್ಯಕ್ತಿಯೊಬ್ಬರು ಕಾಡಾನೆ ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

ಮೃತನನ್ನು ಗುರುಸ್ವಾಮಿ ಎಂದು ಗುರುತಿಸಲಾಗಿದೆ. ಜಾನುವಾರುಗಳನ್ನು ಮೇಯಿಸಲು ಕಾಡಿಗೆ ಹೋಗಿದ್ದ ಅವರು ರಾತ್ರಿಯಾದರೂ ಹಿಂದಿರುಗಿರಲಿಲ್ಲ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಬೆಳಿಗ್ಗೆ ಗ್ರಾಮಸ್ಥರು ಮತ್ತು ಕುಟುಂಬ ಸದಸ್ಯರು ಆತನನ್ನು ಹುಡುಕಿಕೊಂಡು ಹೋದಾಗ ಶವವನ್ನು ನೋಡಿ  ಆಘಾತಕ್ಕೊಳಗಾಗಿದ್ದಾರೆ. ಕಳೆದ ಸಂಜೆ ತಡವಾಗಿ ಘಟನೆ ನಡೆದಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಸ್ಥಳೀಯರು ಆಗ್ರಹಿಸಿದ್ದಾರೆ.

ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆ
ಅರಣ್ಯದೊಳಕ್ಕೆ ಜಾನುವಾರುಗಳನ್ನು ಮೇಯಿಸಲು ಹೋಗಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಗುರುಸ್ವಾಮಿ ಬುಧವಾರ ರಾತ್ರಿ ಮನೆಗೆ ಬಾರದೇ ಇದ್ದಾಗ ಬೆಳಗ್ಗೆ ಹುಡುಕಾಟ ನಡೆಸಿದ್ದಾರೆ. ಕಾಡಂಚಿನ ಅರಣ್ಯದೊಳಗೆ ಗುರುಸ್ವಾಮಿ ಮೃತದೇಹ ಪತ್ತೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com