ಕೊಪ್ಪಳ ಜಿಲ್ಲೆಯಲ್ಲಿ ಚಿರತೆ ದಾಳಿಗೆ ಯುವಕ ಬಲಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಚಿರತೆ ದಾಳಿಯಿಂದ 24 ವರ್ಷದ ಯುವಕ ಮೃತಪಟ್ಟಿದ್ದಾನೆ.
ನರಹಂತಕ ಚಿರತೆ
ನರಹಂತಕ ಚಿರತೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಚಿರತೆ ದಾಳಿಯಿಂದ 24 ವರ್ಷದ ಯುವಕ ಮೃತಪಟ್ಟಿದ್ದಾನೆ.

ಅನೆಗುಂದಿಯ ದುರ್ಗಾದೇವಿ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ವೃತ್ತಿಯಲ್ಲಿ ಬಾಣಸಿಗನಾದ ಹುಲಿಗೇಶ್, ಇಂದು ಬೆಳಿಗ್ಗೆ ಹತ್ತಿರದ ಕಾಡಿನಲ್ಲಿ ಚಿರತೆ ದಾಳಿಯಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಹಿರ್ದೆಸೆಗಾಗಿ ಕಾಡಿಗೆ ಹೋಗಿದ್ದ ವ್ಯಕ್ತಿಯ ಮೇಲೆ ದಾಳಿ ನಡೆಸಿರುವ ಚಿರತೆ, ಸುಮಾರು 100 ಮೀಟರ್ ದೂರಕ್ಕೆ ಪೊದೆಗಳ ಕಡೆಗೆ ಎಳೆದೊಯ್ದಿದೆ. ಆನೆಗುಂದಿ ಮೇಗೊಟ್ ಬಳಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನೆಗುಂದಿ ತಹಶೀಲ್ದಾರ್ ಕೆ ರೇಣುಕಾ ಮತ್ತು ಅರಣ್ಯ ಅಧಿಕಾರಿಯೊಬ್ಬರು ಸ್ಥಳಕ್ಕೆ ಭೇಟಿ ಪರಿಶೀಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com