ಸಿಟಿ ರವಿ ರಾಜಿನಾಮೆ ಅಂಗೀಕರಿಸಿದ ರಾಜ್ಯಪಾಲ ವಜುಭಾಯಿ ವಾಲಾ!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಗೀಕರಿಸಿದ್ದಾರೆ.
ಸಿಟಿ ರವಿ
ಸಿಟಿ ರವಿ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಗೀಕರಿಸಿದ್ದಾರೆ. 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಸಿಟಿ ರವಿ ಅವರು ಆಯ್ಕೆಯಾಗಿದ್ದು ಈ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. 

ಸಿಟಿ ರವಿ ಅವರ ರಾಜಿನಾಮೆಯನ್ನು ಅಂಗೀಕರಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸೂಚಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಜಿನಾಮೆಯನ್ನು ಅಂಗೀಕರಿಸಿದ್ದಾರೆ. 

ಅಕ್ಟೋಬರ್ 3ರಂದೆ ಸಿಟಿ ರವಿ ಅವರು ಯಡಿಯೂರಪ್ಪ ಅವರಿಗೆ ರಾಜಿನಾಮೆ ಸಲ್ಲಿಸಿದ್ದರು. ಬಿಜೆಪಿಯಲ್ಲಿ ಓರ್ವ ವ್ಯಕ್ತಿಗೆ ಒಂದೇ ಹುದ್ದೆ ಎಂಬ ನಿಯಮವಿರುವುದರಿಂದ ಸಿಟಿ ರವಿ ಅವರು ರಾಜಿನಾಮೆ ನೀಡಬೇಕಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com