ವೃಕ್ಷಮಾತೆ ಸಾಲುಮರದ ತಿಮ್ಮಕ್ಕನವರಿಗೆ ಈ ಹಿಂದೆ ಗೌರವ ಡಾಕ್ಟರೇಟ್ ಘೋಷಿಸಿದ್ದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾನಿಲಯ (ಸಿಯುಕೆ) ಇಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ತಿಮ್ಮಕ್ಕನವರ ನಿವಾಸಕ್ಕೆ ತೆರಳಿದ ವಿಶ್ವವಿದ್ಯಾನಿಲಯದ ಪದಾಧಿಕಾರಿಗಳು ಗೌರವ ಡಾಕ್ಟರೇಟ್ ಪದವಿ ನಿಡಿ ಪುರಸ್ಕರಿಸಿದ್ದಾರೆ.
ಈ ಸಂದರ್ಭ ವಿಶ್ವವಿದ್ಯಾನಿಲಯ ಉಪ ಕುಲಪತಿ ಎಚ್.ಎಂ. ಮಹೇಶ್ವರಯ್ಯ, ಪ್ರೊ. ರಾಜೇಶ್ವರಿ ಮಹೇಶ್ವರಯ್ಯ ಭಾಷಾನಿಕಾಯದ ಡೀನ್ ಪ್ರೊ. ಬಸವರಾಜ ಡೋಣೂರ, ಕನ್ನಡ ವಿಭಾಗದ ಮುಖ್ಯಸ್ಥ ವಿಕ್ರಮ ವಿಜಾಜಿ, ಕ್ಲಾಸಿಕಲ್ ಕನ್ನಡದ ನಿರ್ದೇಶಕ ಪ್ರೊ ಬಿ. ಬಿ. ಪೂಜಾರಿ, ಸಹಾಯಕ ಕುಲಸಚಿವ ಅಜೀಂ ಬಾಷಾ ಮತ್ತಿತರರು ಉಪಸ್ಥಿತರಿದ್ದರು.
Advertisement