ಆರ್ ಆರ್ ನಗರ ಉಪಚುನಾವಣೆ: ಚಾಮುಂಡೇಶ್ವರಿ ದರ್ಶನ ಪಡೆದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ

ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದಾರೆ. 
ಚಾಮುಂಡೇಶ್ವರಿ ದರ್ಶನ ಪಡೆದ ಕುಸುಮಾ
ಚಾಮುಂಡೇಶ್ವರಿ ದರ್ಶನ ಪಡೆದ ಕುಸುಮಾ

ಮೈಸೂರು: ಆರ್.ಆರ್ ನಗರ ಮತ್ತು ಶಿರಾ ಕ್ಷೇತ್ರ ಉಪಚುನಾವಣೆಯ ಮತದಾನ ಮುಗಿದಿದ್ದು ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ. ಈ ಮಧ್ಯೆ ಫಲಿತಾಂಶಕ್ಕೂ ಮುನ್ನ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು ತಾಯಿ ಚಾಮುಂಡೇಶ್ವರಿ  ದರ್ಶನ ಪಡೆದಿದ್ದಾರೆ. 

ತಂದೆ ಹನುಮಂತಪ್ಪ ಜೊತೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರು, ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಕುಸುಮಾ ಅವರಿಗೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.

ತಾಯಿ ಚಾಮುಂಡೇಶ್ವರಿ ದರ್ಶನದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಕುಸುಮಾ, ನನಗೆ ಗೆಲ್ಲುವ ಆತ್ಮವಿಶ್ವಾಸ ಇದೆ. ಶೇಕಡವಾರು ಕಡಿಮೆ ಆಯ್ತೆಂಬ ಕಾರಣಕ್ಕೆ ಈ ವಿಶ್ವಾಸ ವ್ಯಕ್ತಪಡಿಸುತ್ತಿಲ್ಲ. 

ಜನರು ನನಗೆ ತೋರಿಸಿದ ಪ್ರೀತಿಯಿಂದ ಈ ವಿಶ್ವಾಸ ಮೂಡಿದೆ. ನಿಷ್ಪಕ್ಷಪಾತ ಚುನಾವಣೆ ನಡೆದಿದೆ. ನಾವು ಇದನ್ನೆ ಬಯಸಿದ್ದೆವು. ಎಲ್ಲಾ ಪಕ್ಷದ ಮತದಾರರು ನನಗೆ ಬೆಂಬಲ ನೀಡಿದ್ದಾರೆ.  ಕಾಂಗ್ರೆಸ್ ನ ಎಲ್ಲಾ ನಾಯಕರು ಒಗ್ಗಟ್ಟಾಗಿ ನನ್ನನ್ನು ಬೆಂಬಲಿಸಿದ್ದಾರೆ ನನ್ನ ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com