ಹಂಪಿಯದ್ದು ಮಂತ್ರಮುಗ್ದಗೊಳಿಸುವ ಅದ್ಭುತ ಸೌಂದರ್ಯ: ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್

ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಕಾಂತ್ ಹಂಪಿಯ ಸೌಂದರ್ಯವನ್ನು ವೀಕ್ಷಣೆ ಮಾಡಿದರು. ವಿಶ್ವಪಾರಂಪರಿಕ ತಾಣದ ಕುರಿತು ಅವರು ಮೆಚ್ಚುಗೆ ಸೂಚಿಸಿದರು. 
ಹಂಪಿಗೆ ನೀತಿ ಆಯೋಗದ ಸಿಇಒ ಭೇಟಿ
ಹಂಪಿಗೆ ನೀತಿ ಆಯೋಗದ ಸಿಇಒ ಭೇಟಿ

ಬಳ್ಳಾರಿ: ನೀತಿ ಆಯೋಗದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಿತಾಭ್ ಕಾಂತ್ ಹಂಪಿಯ ಸೌಂದರ್ಯವನ್ನು ವೀಕ್ಷಣೆ ಮಾಡಿದರು. ವಿಶ್ವಪಾರಂಪರಿಕ ತಾಣದ ಕುರಿತು ಅವರು ಮೆಚ್ಚುಗೆ ಸೂಚಿಸಿದರು. 

ಶನಿವಾರ ಮತ್ತು ಭಾನುವಾರ ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಹಂಪಿ ಪ್ರವಾಸ ಕೈಗೊಂಡಿದ್ದರು. ಕುಟುಂಬ ಸಮೇತ ಶನಿವಾರ ಹಂಪಿಗೆ ಆಗಮಿಸಿದ್ದ ಅವರು ಪ್ರಮುಖ ಸ್ಮಾರಕಗಳ ವೀಕ್ಷಣೆ ನಡೆಸಿದರು. ಪ್ರವಾಸಿ ತಾಣದ ನಿರ್ವಹಣೆ ಬಗ್ಗೆ ಮಾಹಿತಿ ಪಡೆದರು.

ಬ್ಯಾಟರಿ ಚಾಲಿತ ವಾಹನದಲ್ಲಿ ಹಂಪಿ ವೀಕ್ಷಿಸಿ ಭಾನುವಾರವೂ ಸಹ ಹಂಪಿಯ ವಿವಿಧ ಸ್ಮಾರಕಗಳ ವೀಕ್ಷಣೆಯನ್ನು ಅವರು ನಡೆಸಿದರು. ಹಂಪಿಯ ಪ್ರಸಿದ್ಧ ಕಲ್ಲಿನ ರಥದ ಮುಂದೆ ಅವರು ಫೋಟೋ ತೆಗೆಸಿಕೊಂಡರು. 

ಹಂಪಿ ವೀಕ್ಷಣೆ ಬಳಿಕ ಮಾತನಾಡಿದ ಅಮಿತಾಭ್ ಕಾಂತ್, "ಹಂಪಿಯ ಸೌಂದರ್ಯವನ್ನು ನೋಡಲು ಎರಡು ದಿನಗಳ ಸಮಯ ಸಾಕಾಗುವುದಿಲ್ಲ, ಕೆಲವು ದಿನಗಳ ಕಾಲ ರಜೆ ಬೇಕು. ಇಲ್ಲಿಯ ನಿರ್ವಹಣೆಯೂ ಚೆನ್ನಾಗಿದೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com