ಊಟದ ಬುತ್ತಿ ಕೊಟ್ಟು ವಾಪಸಾಗುತ್ತಿದ್ದಾಗ ಬಸ್ಸು ಡಿಕ್ಕಿ: ಬೈಕ್ ಸವಾರ ಸಾವು

ಬಸ್ಸೊಂದು ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಸಂಭವಿಸಿದೆ.
ರಸ್ತೆ ಅಪಘಾತ
ರಸ್ತೆ ಅಪಘಾತ

ಹಾವೇರಿ: ಬಸ್ಸೊಂದು ಡಿಕ್ಕಿ‌ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಸಂಭವಿಸಿದೆ.

27 ವರ್ಷದ ಆಕಾಶ ಮನ್ನಂಗಿ ಮೃತ ಬೈಕ್ ಸವಾರ.

ಆಕಾಶ, ಜಮೀನಿಗೆ ತೆರಳಿ ಕುಟುಂಬಸ್ಥರಿಗೆ ಬುತ್ತಿ ಕೊಟ್ಟು ಹೊಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com