ಹಾವೇರಿ: ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಸಾಪುರ ಗ್ರಾಮದ ನೆಗಳೂರು ಕ್ರಾಸ್ ಬಳಿ ಸಂಭವಿಸಿದೆ.
27 ವರ್ಷದ ಆಕಾಶ ಮನ್ನಂಗಿ ಮೃತ ಬೈಕ್ ಸವಾರ.
ಆಕಾಶ, ಜಮೀನಿಗೆ ತೆರಳಿ ಕುಟುಂಬಸ್ಥರಿಗೆ ಬುತ್ತಿ ಕೊಟ್ಟು ಹೊಂದಿರುಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Advertisement