ವಿದ್ಯುತ್ ಬಿಲ್ ಪಾವತಿಸದ್ದಕ್ಕೆ ಪವರ್ ಕಟ್: ಕತ್ತಲಲ್ಲಿ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ

ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳೇಬೀಡಿನ ಐತಿಹಾಸಿಕ ಹೊಯ್ಸಳೇಶ್ವರ ದೇವಾಲಯವು 10 ದಿನಗಳಿಂದ ಕಗ್ಗತ್ತಲಿನಲ್ಲಿ ಇರುವಂತಾಗಿದೆ. 
ಹೊಯ್ಸಳೇಶ್ವರ ದೇವಾಲಯ
ಹೊಯ್ಸಳೇಶ್ವರ ದೇವಾಲಯ

ಹಾಸನ: ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳೇಬೀಡಿನ ಐತಿಹಾಸಿಕ ಹೊಯ್ಸಳೇಶ್ವರ ದೇವಾಲಯವು 10 ದಿನಗಳಿಂದ ಕಗ್ಗತ್ತಲಿನಲ್ಲಿ ಇರುವಂತಾಗಿದೆ. 

ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣ ಸೆಸ್ಕ ಸಿಬ್ಬಂದಿ ಸಂಪರ್ಕ ಕಡಿತಗೊಳಿಸಿದ್ದು 6 ತಿಂಗಳ ಬಾಕಿ ರೂ.45,000 ನ್ನು ಪುರಾತತ್ವ ವಿಭಾಗ ಪಾವತಿಸಬೇಕಿದೆ. ಪ್ರತಿನಿತ್ಯ ದೇವಗುಲಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಹಾಗೂ ಭಕ್ತರು ಅಧಿಕಾರಿಗಳ ಉದಾಸೀನ ಮನೋಭಾವ ತಿಳಿದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. 

ದೇವಾಲಯದ ಒಳಭಾಗದ ಶಿಲ್ಪಕಲೆಯನ್ನು ಸವಿಯಾಗದೆ ಭಕ್ತರು ನಿರಾಶೆಗೊಳ್ಳುತ್ತಿದ್ದಾರೆ. 3 ತಿಂಗಳ ಹಿಂದೆ ಇದೇ ಕಾರಣಕ್ಕೆ ದೇಗುಲದ ವಿದ್ಯುತ್ ಸಂಪರ್ಕವನ್ನು ಸೆಸ್ಕ ಸಿಬ್ಬಂದಿ ಕಡಿತಗೊಳಿಸಿದ್ದರು. ಬಾಕಿ ಪಾವತಿಸುವುದಾಗಿ ಹೇಳಿದ್ದ ಪುರಾತತ್ವ ವಿಭಾಗದ ಅಧಿಕಾರಿಗಳ ಭರವಸೆ ಮೇರೆಗೆ ಹಾಗೂ ಅರ್ಚಕರ ಮನವಿ ಆಲಿಸಿ ಪುನಃ ಸಂಪರ್ಕ ಕಲ್ಪಿಸಲಾಗಿತ್ತು. ಆದರೆ, ಅಂದಿನಿಂದಲೂ ಬಿಲ್ ಬಾಕಿ ಇದ್ದು, ಈಗ ಮೊತ್ತವೂ ಹೆಚ್ಚಾಗಿರುವ ಕಾರಣ ನಿಯಮಾನುಸಾರ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com