ಚಿತ್ರದುರ್ಗ ಬಳಿ ಸರಣಿ ಅಪಘಾತ: ಇಬ್ಬರ ದಾರುಣ ಸಾವು

ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಇಬ್ಬರೂ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಭವಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಇಬ್ಬರೂ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಭವಿಸಿದೆ.

ಮೃತರನ್ನು ಹಾವೇರಿ ಮೂಲದ ಲತಾ (28) ಮತ್ತು ಬೆಂಗಳೂರಿನ ಅತ್ತಿಬೆಲೆ ನಿವಾಸಿ ಟಾಟಾ ಏಸ್ ಚಾಲಕ ಶಶಿಕುಮಾರ್ (26) ಎಂದು ಗುರುತಿಸಲಾಗಿದೆ.

ಖಾಸಗಿ ಬಸ್ಸು, ಇಂಡಿಕಾ ಕಾರು, ಮಾರುತಿ ಆಮ್ನಿ, ಕ್ಯಾಂಟರ್ ಹಾಗೂ ಟಾಟಾ ಏಸ್ ನಡುವೆ ಸರಣಿ ಅಪಘಾತ ಹೆದ್ದಾರಿಯ ಗ್ರೀನ್ ಲ್ಯಾಂಡ್ ಹೋಟೆಲ್ ಸಮೀಪ ಸರಣಿ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಓಮಿನಿ ಕಾರು ಹಾಗೂ ಟಾಟಾ ಏಸ್ ವಾಹನದಲ್ಲಿದ್ದವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯಲ್ಲಿ ಶ್ರುತಿ (3), ಜ್ಯೋತಿ (25), ಜಾಗೃತಿ (4), ದ್ಯಾಮಣ್ಣ (24) ವರ್ಷ ಎಂಬುವವರು ಗಂಭೀರ ಗಾಯಗೊಂಡಿದ್ದು, ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು  ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com