ಬೆಂಗಳೂರು: ನಗರದ ಹೊಸಗುಡ್ಡದಹಳ್ಳಿಯ ರೇಖಾ ಕೆಮಿಕಲ್ ಫ್ಯಾಕ್ಟರಿಯ ಗೋಡೌನ್ನಲ್ಲಿ ಸಂಭವಿಸಿದ ಅಗ್ನಿ ಅವಘಡ ಮತ್ತೊಮ್ಮೆ ಮರುಕಳಿಸದಂತೆ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದೆ.
ವಸತಿ ಪ್ರದೇಶದಲ್ಲಿರುವ ಗೋದಾಮುಗಳನ್ನು ಕೂಡಲೇ ತೆರವುಗೊಳಿಸಲು ಇಲಾಖೆ ನಿರ್ಧರಿಸಿದ್ದು ನಗರದ ಬೀಟ್ ಪೊಲೀಸರಿಗೆ ಮತ್ತೊಂದು ಜವಾಬ್ದಾರಿ ವಹಿಸಿ, ತಮ್ಮ ಬೀಟಿನಲ್ಲಿ ಕೆಮಿಕಲ್ ಗೋಡೌನ್ ಆಗಿ ರೂಪಾಂತರ ಗೊಂಡಿರುವ ಕಟ್ಟಡಗಳನ್ನು ಸಮಗ್ರವಾಗಿ ಪರಿಶೀಲಿಸಿ ಇಲಾಖೆ ವರದಿ ಕೊಡುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಆದೇಶಿಸಿದ್ದಾರೆ.
ಈ ಕುರಿತು ಎಲ್ಲಾ ಪೊಲೀಸ್ ಠಾಣೆಗಳಿಗೆ ಸುತ್ತೋಲೆ ಕಳುಹಿಸಿ ಕೆಮಿಕಲ್ ಗೋದಾಮು ಬಗ್ಗೆ ಪರಿಶೀಲಿಸುವಂತೆ ಸೂಚಿಸಲಾಗಿದೆ.
Advertisement