ವರದಕ್ಷಿಣೆ ಕೇಸ್ ಹಾಕುವುದಾಗಿ ಬೆದರಿಸಿದ್ದ ನಾದಿನಿಯನ್ನು 20 ಬಾರಿ ಇರಿದು ಕೊಂದ!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ನಾದಿನಿಯನ್ನು 20 ಬಾರಿ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಮೃತರನ್ನು ಬೆಸ್ಕಾಂ ಉದ್ಯೋಗಿಯಾಗಿದ್ದ ಕೆ.ಆರ್.ಪುರಂ ನಿವಾಸಿ ಲಾವಣ್ಯ (37) ಎಂದು ಗುರುತಿಸಲಾಗಿದೆ. 
ವರದಕ್ಷಿಣೆ ಕೇಸ್ ಹಾಕುವುದಾಗಿ ಬೆದರಿಸಿದ್ದ ನಾದಿನಿಯನ್ನು 20 ಬಾರಿ ಇರಿದು ಕೊಂದ!

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ನಾದಿನಿಯನ್ನು 20 ಬಾರಿ ಚಾಕುವಿನಿಂದ ಇರಿದು ಕೊಂದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ. ಮೃತರನ್ನು ಬೆಸ್ಕಾಂ ಉದ್ಯೋಗಿಯಾಗಿದ್ದ ಕೆ.ಆರ್.ಪುರಂ ನಿವಾಸಿ ಲಾವಣ್ಯ (37) ಎಂದು ಗುರುತಿಸಲಾಗಿದೆ. 

ಆರೋಪಿ ವಿಜಯ್ ಓರ್ವ ಟೈಲರ್ ಆಗಿದ್ದು ಆತ ತನ್ನ ಪತ್ನಿ ಲಕ್ಷ್ಮಿಗೆ ವರದಕ್ಷಿಣೆಗಾಗಿ ಪೀಡಿಸುತ್ತಿದ್ದನೆಂದು ಪೋಲೀಸರು ವಿವರಿಸಿದ್ದಾರೆ. ಈ ಸಂಬಂಧ ಲಕ್ಷ್ಮಿ ಅಕ್ಕನಾದ ಲಾವಣ್ಯ ತಾನು ವಿಜಯ್ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ಸಲ್ಲಿಸುವುದಾಗಿ ಬೆದರಿಕೆ ಹಾಕಿದ್ದರು.

ಭಾನುವಾರ ಈ ಕುರಿತಂತೆ ಇಬ್ಬರ ನಡುವೆ ಜಗಳವಾಗಿದೆ. ಆಗ ವಿಜಯ್ ಕುಮಾರ್ ಲಾವಣ್ಯಗೆ ಚಾಕುವಿನಿಂದ ಇರಿದಿದ್ದಾನೆ. 20 ಬಾರಿ ಇರಿದ ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.  ಬಳಿಕ ವಿಜಯ್ ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿ  ಕುತ್ತಿಗೆಗೆ ಚಾಕುವಿನಿಂದ ಚುಚ್ಚಿಕೊಂಡಿದ್ದಾನೆ.  ಆಗ ಅಲ್ಲಿನ ನೆರೆಹೊರೆಯವರುವನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ವಿಜಯ್ ಪತ್ನಿ ಸಲ್ಲಿಸಿದ ದೂರಿನ ಆಧಾರದ ಮೇಲೆ, ಪೊಲೀಸರು ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಮತ್ತು ಆತನ ಡಿಸ್ಚಾರ್ಜ್ ನಂತರ ಅವನ ಬಂಧನವಾಗಲಿದೆ ಎಂದು ಪೋಲೀಸರು ಹೇಳಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com