ಬೆಂಗಳೂರು: ರಮ್ಮಿ, ಪೋಕರ್ ಸೇರಿ ಆನ್ಲೈನ್ ಗೇಮಿಂಗ್ ಎಂಬ ಜೂಜಿನ ವ್ಯಸನಕ್ಕೆ ಹಲವು ಯುವಕರು ಬಲಿಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಹಾಗಾಗಿ ಇಂತಹ ಗೇಮ್ಗಳ ಮೇಲೆ ಕಡಿವಾಣ ಬೀಳಬೇಕು ಎಂದು ಮಾಜಿ ಕೆಪಿಸಿಸಿ ಅಧ್ಯಕ್ಷ, ಶಾಸಕ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ತಾವು ಕೂಡ ಹಲವು ಯುವಕರು ಈ ಆನ್ಲೈನ್ ಜೂಜಿನಲ್ಲಿ ವ್ಯಸ್ತರಾಗಿರುವುದನ್ನು ಗಮನಿಸಿದ್ದೇನೆ. ಎಷ್ಟೋ ಕುಟುಂಬಗಳು ಇದರಿಂದ ನಾಶವಾಗಿ ಹೋಗಿದೆ ಆನ್ ಲೈಟ್ ನ್ ಆಟ 'ಕೌಶಲ್ಯದ ಆಟ-ಅದೃಷ್ಟದ ಆಟವಲ್ಲ' ಎಂಬ ಆಧಾರದ ಮೇಲೆ ಕಾನೂನಿನ ಮಾನ್ಯತೆ ಪಡೆದುಕೊಂಡಿದೆ.
ನಾನು ಈ ವಾದ ಒಪ್ಪುವುದಿಲ್ಲ. ತಮ್ಮ ಪ್ರಕಾರ ಹಣವನ್ನು ಬಾಜಿ ಕಟ್ಟಿ ಆಡುವುದು ಕೂಡು ಜೂಜು ಎಂಬುದು ನಿರ್ವಿವಾದ. ಇಂತಹ ಜೂಜಿಗೆ ವಿಶೇಷವಾಗಿ ಯುವಕರು ಆಕರ್ಷಿತರಾಗಿರುವುದು ದುರಂತ. ಸರ್ಕಾರ ಈ ಮನೆಹಾಳು ಗೇಮಿಂಗ್ಗಳ ಮೇಲೆ ನಿಷೇಧ ಹೇರಬೇಕು ಎಂದು ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
Advertisement