ಲಿಂಗಾಯತ ನಿಗಮದ ಬೆನ್ನಲ್ಲೆ ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಒತ್ತಾಯ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿ ಬಂದಿದೆ.
ಎಸ್ ಆರ್ ವಿಶ್ವನಾಥ್
ಎಸ್ ಆರ್ ವಿಶ್ವನಾಥ್

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿ ಬಂದಿದೆ.

ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಮಾತನಾಡಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರ ಸ್ವಾಗತಾರ್ಹ. ಲಿಂಗಾಯತ ಅಭಿವೃಧ್ಧಿ ನಿಗಮಕ್ಕೆ ನಮ್ಮ ತಕರಾರು ಇಲ್ಲ. ಅದೇ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿಗಳನ್ನು ಒಕ್ಕಲಿಗ ಸಮುದಾಯದ ನಾಯಕರು ‌ಭೇಟಿ ಮಾಡಿ ಒತ್ತಾಯಿಸುತ್ತೇವೆ. ವೀರಶೈವ ಲಿಂಗಾಯತ ಸಮುದಾಯ ದೊಡ್ಡದು ಅದೇ ರೀತಿ ಒಕ್ಕಲಿಗ ಸಮುದಾಯವೂ ದೊಡ್ಡದು ಎಂದರು.

ಒಕ್ಕಲಿಗ ಸಮುದಾಯದಲ್ಲೂ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಹಾಗಾಗಿ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೆ ಒತ್ತಾಯಿಸಿ, ಸಮುದಾಯದ ಸಚಿವರು, ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ವಿಶ್ವನಾಥ್ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com