ಹಾಸನ: ಅನುಮಾನದ ಭೂತಕ್ಕೆ ತುಂಬು ಜೀವವೊಂದು ಬಲಿಯಾಗಿದೆ. ಹೌದು ಪತ್ನಿಯ ನಡತೆ ಬಗ್ಗೆ ಶಂಕಿಸುತ್ತಿದ್ದ ಪತಿಯೊರ್ವ ಕಳೆದ ರಾತ್ರಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕಾಚೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು 25 ವರ್ಷದ ಪೂಜಾ ಎಂದು ಗುರುತಿಸಲಾಗಿದೆ.
ಆರೋಪಿ ಗಂಗಾಧರ್ ಪತ್ನಿ ಹಾಗೂ ಐದು ವರ್ಷದ ಮಗನ ಜೊತೆ ಕಾಚೇನಹಳ್ಳಿಯಲ್ಲಿ ವಾಸವಾಗಿದ್ದರು. ಪತ್ನಿಯನ್ನು ಅನುಮಾನದ ಕಣ್ಣುಗಳಿಂದ ನೋಡುತ್ತಿದ್ದ ಗಂಗಾಧರ್ ಈ ಸಂಬಂಧ ಪತ್ನಿಯೊಂದಿಗೆ ಜಗಳವಾಡುತ್ತಿದ್ದ.
ಕಳೆದ ರಾತ್ರಿ ಜಗಳ ವಿಕೋಪಕ್ಕೆ ತಿರುಗಿದ್ದ ಕೋಪದಲ್ಲಿ ಗಂಗಾಧರ್ ಪೂಜಾಳನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ವಿಷಯ ತಿಳಿದ ಆರೋಪಿ ಗಂಗಾಧರ್ ತಾಯಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಪರಿಸ್ಥಿತಿ ಗಂಭೀರವಾಗಿದೆ.
ಈ ಸಂಬಂಧ ಚನ್ನರಾಯಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement