ಭಾರತದಲ್ಲಿ ವಿನ್ಯಾಸಗೊಂಡ ತಂತ್ರಜ್ಞಾನಗಳನ್ನು ಜಗತ್ತಿಗೆ ನೀಡುವ ಸಮಯ ಇದಾಗಿದೆ: ಪ್ರಧಾನ ಮಂತ್ರಿ ನರೇಂದ್ರ ಮೋದಿ

ಕೇಂದ್ರ ಸರ್ಕಾರ 2015ರಲ್ಲಿ ಆರಂಭಿಸಿದ್ದ ಡಿಜಿಟಲ್ ಇಂಡಿಯಾ ಇಂದು ನಮ್ಮ ಜೀವನದ ಭಾಗವಾಗಿ ಬದಲಾವಣೆಯಾಗಿದ್ದು, ಭೀಮ್ ಯುಪಿಐ(ಹಣ ಪಾವತಿ ಆಪ್) ಅದಕ್ಕೆ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಬೆಂಗಳೂರು ಟೆಕ್ ಸಮ್ಮಿಟ್ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು ಟೆಕ್ ಸಮ್ಮಿಟ್ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ನಮ್ಮ ಸ್ಥಳೀಯ ತಂತ್ರಜ್ಞಾನಗಳು ಜಾಗತಿಕ ಮಟ್ಟಕ್ಕೇರುವ ಸಾಮರ್ಥ್ಯವನ್ನು ಹೊಂದಿವೆ.ಭಾರತದಲ್ಲಿ ವಿನ್ಯಾಸಗೊಳಿಸ ಲಾದ ತಂತ್ರಜ್ಞಾನಗಳನ್ನು ಜಗತ್ತಿಗೆ ನಿಯೋಜಿಸುವ ಸಮಯ ಈಗ ಬಂದಿದೆ.ಇತ್ತೀಚೆಗೆ ಐಟಿ ಉದ್ಯಮದ ಅನುಸರಣೆ ಹೊರೆಯನ್ನು ಸರಾಗವಾಗಿಸಿದ ಕ್ರಮ ವೂ ಸೇರಿದಂತೆ ಸರ್ಕಾರದ ನೀತಿ ನಿರ್ಧಾರಗಳು ಯಾವಾಗಲೂ ತಂತ್ರ ಜ್ಞಾನ ಮತ್ತು ನಾವೀನ್ಯತೆ ಉದ್ಯಮವನ್ನು ಉದಾರೀಕರಣಗೊಳಿಸುವ ಗುರಿಯನ್ನು ಹೊಂದಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದರು.

ಬೆಂಗಳೂರು ಟೆಕ್ ಶೃಂಗಸಭೆಯನ್ನು ವಿಡಿಯೋ ಕಾನ್ಫರೆನ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು,ಭಾರತದ ಭವಿಷ್ಯದ ನೀತಿ ಚೌಕಟ್ಟುಗಳನ್ನು ರೂಪಿಸಲು ಟೆಕ್ ಉದ್ಯಮದ ಪಾಲುದಾರರನ್ನು ತೊಡಗಿಸಿಕೊಳ್ಳಲು ಸರ್ಕಾರ ಯಾವಾಗಲೂ ಪ್ರಯತ್ನಿಸುತ್ತದೆ.ಇಂದು ಡಿಜಿಟಲ್ ಇಂಡಿಯಾವನ್ನು ಸರ್ಕಾರದ ಒಂದು ಸಾಮಾನ್ಯ ಉಪಕ್ರಮವಾಗಿ ನೋಡು ತ್ತಿಲ್ಲ.ಬದಲಿಗೆ ಇದು ವಿಶೇಷವಾಗಿ ಬಡವರಿಗೆ,ಹಿಂದುಳಿದವರಿಗೆ ಮತ್ತು ಸರ್ಕಾರದಲ್ಲಿರುವವರಿಗೆ ಒಂದು ಜೀವನ ವಿಧಾನವಾಗಿದೆ ಎಂದು ಪ್ರಧಾನಿ ಹರ್ಷ ವ್ಯಕ್ತಪಡಿಸಿದರು.

ಡಿಜಿಟಲ್ ಇಂಡಿಯಾದಿಂದಾಗಿ,ನಮ್ಮ ರಾಷ್ಟ್ರವು ಮಾನವ ಕೇಂದ್ರಿತ ಅಭಿವೃದ್ಧಿ ವಿಧಾನವನ್ನು ಕಂಡಿದೆ.ಬೃಹತ್ ಪ್ರಮಾಣದಲ್ಲಿ ತಂತ್ರಜ್ಞಾನವನ್ನು ಬಳ ಸುತ್ತಿರುವುದರಿಂದ ನಾಗರಿಕರು ಹಲ ವಾರು ಬದಲಾವಣೆಗಳನ್ನು ಕಂಡಿ ದ್ದಾರೆ ಮತ್ತು ಇದರ ಪ್ರಯೋಜನಗಳು ಸ್ಪಷ್ಟವಾಗಿ ಗೋಚರಿ ಸುತ್ತಿವೆ.ಸರ್ಕಾರವು ಡಿಜಿಟಲ್ ಮತ್ತು ತಂತ್ರಜ್ಞಾನಗಳ ಮಾರುಕಟ್ಟೆಯನ್ನು ಸೃಷ್ಟಿಸಿರುವುದು ಮಾತ್ರವಲ್ಲ,ಇದನ್ನು ಎಲ್ಲಾ ಯೋಜನೆ ಗಳ ಪ್ರಮುಖ ಭಾಗವನ್ನಾಗಿ ಮಾಡಿದೆ.

ತಂತ್ರಜ್ಞಾನವೇ ಮೊದಲು ಎಂಬುದು ತಮ್ಮ ಆಡಳಿತ ಮಾದರಿಯಾಗಿದ್ದು,ತಂತ್ರಜ್ಞಾನದ ಮೂಲಕ ಕೋಟ್ಯಂತರ ರೈತರು ಒಂದೇ ಕ್ಲಿಕ್ನಲ್ಲಿ ಹಣಕಾಸು ನೆರವು ಪಡೆಯುತ್ತಿದ್ದಾರೆ ಮತ್ತು ವಿಶ್ವದ ಅತಿದೊಡ್ಡ ಆರೋಗ್ಯ ಯೋಜನೆಯಾದ ಆಯುಷ್ಮಾನ್ ಭಾರತ್ ಅನ್ನು ಯಶಸ್ವಿಯಾಗಿ ನಿರ್ವಹಿಸಲಾಗುತ್ತಿದೆ. ಕಟ್ಟುನಿಟ್ಟಾದ ಲಾಕ್ಡೌನ್ ಸಂದರ್ಭದ ಲ್ಲಿಯೂ ತಂತ್ರಜ್ಞಾನದಿಂದಾಗಿ ಭಾರತದ ಬಡವರು ಸೂಕ್ತ ಮತ್ತು ತ್ವರಿತ ನೆರವು ಪಡೆಯಲು ಸಾಧ್ಯವಾಯಿತು ಎಂದು ಅವರು ಒತ್ತಿ ಹೇಳಿದರು.

ಇಷ್ಟೊಂದು ಬೃಹತ್ ಪ್ರಮಾಣದ ಪರಿಹಾರಕ್ಕೆ ಸಮನಾಗಿ ಬಹಳವಿಲ್ಲ ಎಂದು ಅವರು ಹೇಳಿದರು. ಸೇವೆಗಳ ಉತ್ತಮ ವಿತರಣೆ ಮತ್ತು ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಡೇಟಾ ವಿಶ್ಲೇಷಣೆಯ ನ್ನು ಸರ್ಕಾರ ಬಳಸಿಕೊಂಡಿದೆ.ನಮ್ಮ ಯೋಜನೆಗಳು ಕಡತ ಗಳನ್ನು ಮೀರಿ,ಜನಜೀವನವನ್ನು ಇಷ್ಟೊಂದು ತ್ವರಿತಗತಿಯಲ್ಲಿ ಮತ್ತು ಪ್ರಮಾಣದಲ್ಲಿ ಬದಲಾಯಿಸಲು ತಂತ್ರಜ್ಞಾನವೇ ಪ್ರಮುಖ ಕಾರಣ.ತಂತ್ರಜ್ಞಾನ ದಿಂದಾಗಿ ನಾವು ಎಲ್ಲರಿಗೂ ವಿದ್ಯುತ್ ಒದಗಿಸಲು ಸಾಧ್ಯವಾಗಿದೆ, ಟೋಲ್ ಬೂತ್ಗಳನ್ನು ವೇಗವಾಗಿ ದಾಟುತ್ತಿದ್ದೇವೆ, ಕಡಿಮೆ ಅವಧಿಯಲ್ಲಿ ಹೆಚ್ಚು ಜನರಿಗೆ ಲಸಿಕೆ ಹಾಕುವ ವಿಶ್ವಾಸವನ್ನು ನೀಡಿದೆ ಎಂದು ಅವರು ತಿಳಿಸಿದರು.

ಈ ಸಾಂಕ್ರಾಮಿಕ ಸಮಯದಲ್ಲಿ ತಂತ್ರಜ್ಞಾನ ಕ್ಷೇತ್ರವು ತನ್ನ ಸ್ಥಿತಿಸ್ಥಾಪಕತ್ವವನ್ನು ತೋರಿಸಿದೆ ಎಂದು ಪ್ರಧಾನಿ ಶ್ಲಾಘಿಸಿದರು. ಒಂದು ದಶಕದಲ್ಲಿ ಆಗಿರದ ತಂತ್ರಜ್ಞಾನದ ಅಳವಡಿಕೆಯು ಕೆಲವೇ ತಿಂಗಳುಗಳಲ್ಲಿ ಸಂಭವಿಸಿದೆ ಎಂದು ಅವರು ಹೇಳಿದರು.

ಎಲ್ಲಿಂದಲಾದರೂ ಕೆಲಸ ಮಾಡುವುದು ಹೊಸ ರೂಢಿ ಯಾಗಿದೆ ಮತ್ತು ಅದೇ ಮುಂದುವರೆಯಲಿದೆ. ಶಿಕ್ಷಣ, ಆರೋಗ್ಯ, ಶಾಪಿಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಮಾಣದ ತಂತ್ರಜ್ಞಾನ ಅಳವಡಿಕೆ ಕಂಡುಬ ರುತ್ತಿದೆ. ಕೈಗಾರಿಕಾ ಯುಗದ ಸಾಧನೆಗಳು ಮುಗಿದಿವೆ,ನಾವೀಗ ಮಾಹಿತಿ ಯುಗದ ಮಧ್ಯದಲ್ಲಿದ್ದೇವೆ ಎಂದು ಪ್ರಧಾನಿ ಹೇಳಿದರು.ಕೈಗಾರಿಕಾ ಯುಗದ ಬದಲಾವಣೆ ಗಳು ಒಂದೇ ದಿಕ್ಕಿನಲ್ಲಿದ್ದವು, ಆದರೆ ಮಾಹಿತಿ ಯುಗದಲ್ಲಿ ಬದಲಾವಣೆಯು ಹಲವು ಆಯಾಮಗಳಲ್ಲಿ ಆಗುತ್ತಿದೆ ಎಂದು ಅವರು ಹೇಳಿದರು.

ಕೈಗಾರಿಕಾ ಯುಗದಲ್ಲಿ ಮೊದಲು ಕಾರ್ಯಪ್ರವೃತ್ತರಾಗುವುದು ಮುಖ್ಯವಾಗಿತ್ತು. ಮಾಹಿತಿ ಯುಗದಲ್ಲಿ ಉತ್ತಮವಾಗಿ ಕಾರ್ಯಪ್ರವೃತ್ತರಾಗುವುದು ಮುಖ್ಯವಾಗಿದೆ ಎಂದು ಅವರು ಒತ್ತಿ ಹೇಳಿದರು. ಯಾರು ಬೇಕಾದರೂ, ಯಾವುದೇ ಸಮಯದಲ್ಲಿ ಮಾರುಕಟ್ಟೆಯಲ್ಲಿ ಅಸ್ತಿತ್ವದಲ್ಲಿರುವ ಎಲ್ಲಾ ಸಮೀಕರಣಗಳನ್ನು ಮುರಿಯುವ ಉತ್ಪನ್ನವನ್ನು ತಯಾರಿಸಬಹುದು ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಭಾರತವು ಮಾಹಿತಿ ಯುಗದಲ್ಲಿ ಮುಂದೆ ಸಾಗಲು ಸಾಧ್ಯವಾದ ವಿಶಿಷ್ಟ ಸ್ಥಾನದಲ್ಲಿದೆ.ಭಾರತವು ಉತ್ತಮ ಬುದ್ಧಿಮತ್ತೆಯವರನ್ನ ಮತ್ತು ದೊಡ್ಡ ಮಾರುಕ ಟ್ಟೆಯನ್ನು ಹೊಂದಿದೆ.ಚೌಕಟ್ಟಿನ ಮಟ್ಟದ ಮನೋಭಾವವು ಅನೇಕ ಯಶಸ್ವಿ ಉತ್ಪನ್ನಗಳ ಪರಿಸರ ವ್ಯವಸ್ಥೆಯನ್ನು ನಿರ್ಮಿಸುವ ಸಾಮರ್ಥ್ಯವನ್ನು ಹೊಂದಿದೆ.ಯುಪಿಐ, ನ್ಯಾಷನಲ್ ಡಿಜಿಟಲ್ ಹೆಲ್ತ್ ಮಿಷನ್, ಸ್ವಾಮಿತ್ವ ಯೋಜನೆ ಮುಂತಾದ ಚೌಕಟ್ಟಿನ ಮಟ್ಟದ ಮನೋಭಾವದ ಹಲವಾರು ಉಪಕ್ರ ಮಗಳನ್ನು ಅವರು ಪಟ್ಟಿ ಮಾಡಿದರು.ರಕ್ಷಣಾ ಕ್ಷೇತ್ರದ ವಿಕಸನಕ್ಕೆ ತಂತ್ರಜ್ಞಾನವು ವೇಗವನ್ನು ಒದಗಿಸುತ್ತಿದೆ ಎಂದು ಅವರು ಹೇಳಿದರು.

ತಂತ್ರಜ್ಞಾನ ಬಳಕೆಯನ್ನು ಹೆಚ್ಚಿಸುತ್ತಿರುವುದರಿಂದ ಡೇಟಾ ಸಂರಕ್ಷಣೆ ಮತ್ತು ಸೈಬರ್ ಸುರಕ್ಷತೆಯ ಅಗತ್ಯವನ್ನು ಅವರು ಒತ್ತಿ ಹೇಳಿದರು. ಸೈಬರ್ ದಾಳಿ ಮತ್ತು ವೈರಸ್ಗಳ ವಿರುದ್ಧ ಡಿಜಿಟಲ್ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಬಳಸುವ ಸೈಬರ್ ಭದ್ರತಾ ಪರಿಹಾರಗಳನ್ನು ರೂಪಿಸುವಲ್ಲಿ ಯುವಕರು ಪ್ರಮುಖ ಪಾತ್ರ ವಹಿಸಬೇಕು ಎಂದು ಅವರು ಕರೆ ನೀಡಿದರು.

ಜೈವಿಕ ವಿಜ್ಞಾನ, ಎಂಜಿನಿಯರಿಂಗ್ ಮುಂತಾದ ವಿಜ್ಞಾನ ಕ್ಷೇತ್ರಗಳಲ್ಲಿ ನಾವೀನ್ಯತೆಯ ವ್ಯಾಪ್ತಿ ಮತ್ತು ಅವಶ್ಯಕತೆ ಪ್ರಸ್ತುತವಾಗಿದೆ.ನಾವೀನ್ಯತೆಯು ಪ್ರಗ ತಿಗೆ ಮುಖ್ಯವಾಗಿದೆ. ಪ್ರತಿಭಾವಂತ ಯುವಜನರು ಮತ್ತು ಅವರ ಉತ್ಸಾಹದಿಂದಾಗಿ ನಾವೀನ್ಯತೆಯ ವಿಷಯದಲ್ಲಿ ಭಾರತಕ್ಕೆ ಸ್ಪಷ್ಟವಾದ ಪ್ರಯೋಜನ ವಿದೆ.ನಮ್ಮ ಯುವಕರ ಸಾಮರ್ಥ್ಯ ಮತ್ತು ತಂತ್ರಜ್ಞಾನದ ಸಾಧ್ಯತೆಗಳಿಗೆ ಅಂತ್ಯವೇ ಇಲ್ಲ.ನಮ್ಮಲ್ಲಿರುವ ಅತ್ಯುತ್ತಮವಾದುದನ್ನು ನೀಡಲು ಮತ್ತು ಅವು ಗಳನ್ನು ಪ್ರಯೋಜನ ಪಡೆಯಲು ಇದು ಸುಸಮಯವಾಗಿದೆ.ನಮ್ಮ ಮಾಹಿತಿ ತಂತ್ರಜ್ಞಾನ ಕ್ಷೇತ್ರವು ನಮ್ಮನ್ನು ಹೆಮ್ಮೆಪಡುವಂತೆ ಮಾಡುತ್ತದೆ ಎಂದು ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

ಇಂದಿನಿಂದ ನಾಡಿದ್ದು 21ರವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿಟ್ ನ್ನು ಕರ್ನಾಟಕ ಸರ್ಕಾರ, ಕರ್ನಾಟಕ ಇನ್ನೊವೇಶನ್ ಅಂಡ್ ಟೆಕ್ನಾಲಜಿ ಸೊಸೈಟಿ, ವಿಷನ್ ಗ್ರೂಪ್ ಆನ್ ಇನ್ಫಾರ್ಮೇಷನ್ ಟೆಕ್ನಾಲಜಿ, ಬಯೊಟೆಕ್ನಾಲಜಿ ಅಂಡ್ ಸ್ಟಾರ್ಟ್ ಅಪ್, ಸಾಫ್ಟ್ ವೇರ್ ಟೆಕ್ನಾಲಜಿ ಪಾರ್ಕ್ಸ್ ಗಳ ಸಹಯೋಗದಲ್ಲಿ ಆಯೋಜಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com