ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಮತ್ತೊಮ್ಮೆ ಸಿಬಿಐ ಸಮನ್ಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ. 
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್

ಬೆಂಗಳೂರು:ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರಿನಲ್ಲಿಂದು ಈ ಬಗ್ಗೆ ತಿಳಿಸಿದ ಶಿವಕುಮಾರ್, ಬೆಂಗಳೂರು ಸಿಬಿಐ ಕಚೇರಿಯಿಂದ ಅಕ್ಟೋಬರ್ 5 ರಂದು ತಮ್ಮ ನಿವಾಸದ ಮೇಲೆ ನಡೆದಿದ್ದ ದಾಳಿ ಸಂಬಂಧ ತಮಗೆ ನ.19 ರಂದು ಸಮನ್ಸ್ ಜಾರಿಯಾಗಿರುವುದು ನಿಜ. ನವೆಂಬರ್ 23 ರಂದು ಹಾಜರಾಗಲು ಸೂಚಿಸಿದ್ದಾರೆ ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ಸಿಬಿಐ ನೋಟಿಸ್ ಸಮನ್ಸ್ ನೀಡಿದೆ. ನ.19ರಂದು ಮಗಳ ನಿಶ್ಚಿತಾರ್ಥದಲ್ಲಿ ಭಾಗಿಯಾಗಿದ್ದರಿಂದ ಸಿಬಿಐ ಕಚೇರಿಗೆ ಹಾಜರಾಗಲಾಗಲಿಲ್ಲ ಹಾಗೂ ನ.22 ರಿಂದ ತಾವು ಉತ್ತರ ಕರ್ನಾಟಕ ಪ್ರವಾಸದಲ್ಲಿರುವುದರಿಂದ ಅಂದು ಕೂಡ ಹಾಜರಾಗಲು ಆಗುವುದಿಲ್ಲ. ಅದರ ಬದಲಾಗಿ ನ.25 ರಂದು ಸಂಜೆ 4 ಗಂಟೆಗೆ ಸಿಬಿಐ ಕಚೇರಿ ವಿಚಾರಣೆಗೆ ಹಾಜರಾಗುವುದಾಗಿ ಮನವಿ ಮಾಡಿದ್ದು ಇದಕ್ಕೆ ಸಿಬಿಐ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com