ಪವರ್ ಟಿವಿ ಮುಖ್ಯಸ್ಥ ರಾಕೇಶ್ ಶೆಟ್ಟಿಗೆ ನಿರೀಕ್ಷಣಾ ಜಾಮೀನು ಮಂಜೂರು 

ಕನ್ನಡ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿಯವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ರಾಜ್ಯ ಹೈಕೋರ್ಟ್, ವೈಯಕ್ತಿಕ ಬಾಂಡ್ 2 ಲಕ್ಷ ರೂಪಾಯಿ, ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ವಿಧಿಸಿದೆ. 
ಹೈಕೋರ್ಟ್
ಹೈಕೋರ್ಟ್

ಬೆಂಗಳೂರು: ಕನ್ನಡ ಸುದ್ದಿವಾಹಿನಿ ವ್ಯವಸ್ಥಾಪಕ ನಿರ್ದೇಶಕ ರಾಕೇಶ್ ಶೆಟ್ಟಿಯವರಿಗೆ ನಿರೀಕ್ಷಣಾ ಜಾಮೀನು ಸಿಕ್ಕಿದೆ. ರಾಜ್ಯ ಹೈಕೋರ್ಟ್, ವೈಯಕ್ತಿಕ ಬಾಂಡ್ 2 ಲಕ್ಷ ರೂಪಾಯಿ, ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ವಿಧಿಸಿದೆ. 

ಇದನ್ನು 20 ದಿನಗಳೊಳಗೆ ತನಿಖಾಧಿಕಾರಿ ಮುಂದೆ ಸಲ್ಲಿಸುವಂತೆ ಹಾಗೂ ತನಿಖೆಗೆ ಎಲ್ಲಾ ರೀತಿಯಿಂದಲೂ ಸಹಕರಿಸುವಂತೆ, ಕೋರ್ಟ್ ನ ಅನುಮತಿಯಿಲ್ಲದೆ ತ್ವರಿತ ನ್ಯಾಯಾಲಯದ ವ್ಯಾಪ್ತಿಯನ್ನು ಬಿಟ್ಟು ಹೋಗದಂತೆಯೂ ನ್ಯಾಯಮೂರ್ತಿಗಳಾದ ಬಿ ಎ ಪಾಟೀಲ್ ಆದೇಶ ಹೊರಡಿಸಿದ್ದಾರೆ. 

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಪುತ್ರ ಬಿ ವೈ ವಿಜಯೇಂದ್ರ ಅವರ ವಿರುದ್ಧ ಭ್ರಷ್ಟಾಚಾರ ಆರೋಪದ ಕಾರ್ಯಕ್ರಮ ಪವರ್ ಟಿವಿಯಲ್ಲಿ ಪ್ರಸಾರವಾಗಿತ್ತು.ಇದಾದ ಬಳಿಕ ರಾಮಲಿಂಗಂ ಕನ್ಸ್ಟ್ರಕ್ಷನ್ ಕಂಪೆನಿ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ಚಂದ್ರಕಾಂತ್ ರಾಮಲಿಂಗಂ ರಾಕೇಶ್ ಶೆಟ್ಟಿ ವಿರುದ್ಧ ಬಿಡಿಎಯಿಂದ ಹಣ ಮಂಜೂರು ಮಾಡಿಸಲು ಲಂಚ ಕೇಳಿದ್ದರು ಎಂದು ದೂರು ನೀಡಿದ್ದರ ಮೇಲೆ ಬಂಧನವಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com