ಮಡಿಕೇರಿ: ಆಂಧ್ರದಿಂದ ಕೊಡಗಿಗೆ ಅಕ್ರಮವಾಗಿ ನಕ್ಷತ್ರ ಆಮೆಗಳ ಸಾಗಾಟ ನಡೆಸಿದ್ದ ನಾಲ್ವರ ಸೆರೆ

ಆರ್‌ಎಂಸಿ ಯಾರ್ಡ್ ಬಳಿ ಕಾರ್ಯಾಚರಣೆ ನಡೆಸಿದ ವೇಳೆ ಅರಣ್ಯಾಧಿಕಾರಿಗಳು ಬೆಂಗಳೂರಿನಿಂದ ಗೋಣಿಕೊಪ್ಪಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪರೂಪದ ಜಾತಿಯ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಸಂಬಂಧ ನಾಲ್ವರು ಅಕ್ರಮ ಬೇಟೆಗಾರರನ್ನು ಬಂಧಿಸಲಾಗಿದೆ.
ಮಡಿಕೇರಿ: ಆಂಧ್ರದಿಂದ ಕೊಡಗಿಗೆ ಅಕ್ರಮವಾಗಿ ನಕ್ಷತ್ರ ಆಮೆಗಳ ಸಾಗಾಟ ನಡೆಸಿದ್ದ ನಾಲ್ವರ ಸೆರೆ

ಮಡಿಕೇರಿ: ಆರ್‌ಎಂಸಿ ಯಾರ್ಡ್ ಬಳಿ ಕಾರ್ಯಾಚರಣೆ ನಡೆಸಿದ ವೇಳೆ ಅರಣ್ಯಾಧಿಕಾರಿಗಳು ಬೆಂಗಳೂರಿನಿಂದ ಗೋಣಿಕೊಪ್ಪಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪರೂಪದ ಜಾತಿಯ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಸಂಬಂಧ ನಾಲ್ವರು ಅಕ್ರಮ ಬೇಟೆಗಾರರನ್ನು ಬಂಧಿಸಲಾಗಿದೆ.

ಬಂಧಿತರನ್ನು ಕರ್ನೂಲ್ ಜಿಲ್ಲೆಯ ಮಂಚಾಲ ಗ್ರಾಮದ ಟಿ ಲಕ್ಷ್ಮಣ್ದ ಮಂಡಲಂನ ಆರ್.ಲಕ್ಷ್ಮೀನಾರಾಯಣ, ತೆಲಂಗಾಣದ ಮೆಹಬೂಬ್ ನಗರ ಬಳಿಯ ಸಿಂಧನೂರ್ ಗ್ರಾಮದ ತೆಲುಗರ  ಇ ತಿಮ್ಮಪ್ಪ ಮತ್ತು ಬೆಂಗಳೂರಿನ ಎಸ್ ನಾಗೇಶ್ ಎಂದು ಗುರುತಿಸಲಾಗಿದೆ.

ಅಳಿವಿನಂಚಿನಲ್ಲಿರುವ ಜೀವಿಯಾದ ನಕ್ಷತ್ರ ಆಮೆಯನ್ನು ಆಂಧ್ರಪ್ರದೇಶದಿಂದ ಕೊಡಗಿಗೆ ಅಕ್ರಮ ಸಾಗಾಟ ನಡೆಸಲಾಗುತ್ತಿತ್ತು.

ಆರೋಪಿಗಳನ್ನು ಪೊನ್ನಂಪೆಟೆ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಅಧೀಕ್ಷಕ ಸುರೇಶ್ ಬಾಬು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com