ಮೈಸೂರು: ಕೊರೋನಾ ಸೋಂಕಿನಿಂದ ರೈಲ್ವೆ ಆಸ್ಪತ್ರೆಯಲ್ಲಿ ವೈದ್ಯ ಸಾವು

ಕೋವಿಡ್19 ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 47 ವರ್ಷದ ವೈದ್ಯರೊಬ್ಬರು ಮಹಾಮಾರಿ  ಕೊರೋನಾಗೆ ಬಲಿಯಾಗಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೈಸೂರು: ಕೋವಿಡ್19 ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 47 ವರ್ಷದ ವೈದ್ಯರೊಬ್ಬರು ಮಹಾಮಾರಿ  ಕೊರೋನಾಗೆ ಬಲಿಯಾಗಿದ್ದಾರೆ.

ಮೈಸೂರು ರೈಲ್ವೆ ಆಸ್ಪತ್ರೆಯಲ್ಲಿ ಹೆಚ್ಚುವರಿ ಮೆಡಿಕಲ್ ಸೂಪರಿಂಡೆಂಟ್ ಆಗಿದ್ದ ಡಾ.ಅರುಣ್ ಕುಮಾರ್ ಕೊರೋನಾ ಸೋಂಕಿನಿಂದ ಬಳಲುತ್ತಿದ್ದರು. ಶನಿವಾರ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಮೈಸೂರಿನ ರೈಲ್ವೆ ವಿಭಾಗದಲ್ಲಿ ಸಾವನ್ನಪ್ಪಿದ ಮೊದಲ ಆರೋಗ್ಯ ಕಾರ್ಯಕರ್ತರಾಗಿದ್ದಾರೆ.

ಕಳೆದ ಒಂದು ತಿಂಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳ್ಳಾರಿಯ ವಿಜಯನಗರ ಮೆಡಿಕಲ್ ಸಂಸ್ಥೆಯಲ್ಲಿ ಎಂಬಿಬಿಎಸ್ ಪೂರ್ಣಗೊಳಿಸಿದ್ದ ಅರುಣ್ ಕುಮಾರ್ ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com