ಐಎಂಎ ಬಹುಕೋಟಿ ವಂಚನೆ: ಮತ್ತೋರ್ವ ಆರೋಪಿ, ಬಿಡಿಎ ಅಧಿಕಾರಿ ಸಿಬಿಐ ಬಲೆಗೆ 

ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಸೋಮವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ಪಿಡಿ ಕುಮಾರ್
ಪಿಡಿ ಕುಮಾರ್

ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಬಿಐ ಅಧಿಕಾರಿಗಳು ಸೋಮವಾರ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬಿಡಿಎ ವಿಶೇಷ ಭೂಸ್ವಾಧೀನಾಧಿಕಾರಿ ಪಿ.ಡಿ.ಕುಮಾರ್ ಬಂಧಿತ ಆರೋಪಿಯಾಗಿದ್ದು, ಈತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಮೊಹಮ್ಮದ್ ಮನ್ಸೂರ್​ ಖಾನ್ ಹಣ ರಿಯಲ್ ಎಸ್ಟೇಟ್​ ವಲಯದಲ್ಲಿ ಹೂಡಿಕೆಯಾಗಿದೆ. ಮನ್ಸೂರ್ ಖಾನ್ ನಿಂದ 3 ರಿಂದ 4 ಕೋಟಿ ರೂ. ಹಣವನ್ನು ಪಿ.ಡಿ. ಕುಮಾರ್ ಪಡೆದಿದ್ದರು ಎಂದು ಆರೋಪಿಸಿ ಕುಮಾರ್​ ವಿರುದ್ಧ ಸಿಬಿಐ ಅಧಿಕಾರಿಗಳು ಎಫ್ ಐಆರ್ ದಾಖಲಿಸಿದ್ದರು. 

ಪಿಡಿ ಕುಮಾರ್​ ಅವರನ್ನು ಬಂಧಿಸಿದ ಅಧಿಕಾರಿಗಳು, ಸಿಬಿಐ ವಿಶೇಷ ನ್ಯಾಯಾಲಯದ ಎದುರು ಹಾಜರುಪಡಿಸಿದ್ದರು. 
ನಂತರ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಕುಮಾರ್​ ಅವರನ್ನು ಮೂರು ದಿನಗಳ ಕಾಲ ಸಿಬಿಐ ವಶಕ್ಕೆ ನೀಡಿ ಆದೇಶಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com